ಕೊರೋನಾ ವಿರುದ್ಧದ ಹೋರಾಟಕ್ಕೆ 2 ಕೋಟಿ ರೂ. ದೇಣಿಗೆ ಕೊಟ್ಟ ನಟ..!

-masthmagaa.com:

ಕೊರೋನಾ ವೈರಸ್​ನಿಂದಾಗಿ ಇಡೀ ಭಾರತ ಲಾಕ್​ಡೌನ್​​ ಆಗಿದೆ. ಈ ನಡುವೆ ಮನೆಯಲ್ಲೇ ತಮಗೆ ತಾವು ನಿರ್ಬಂಧ ವಿಧಿಸಿಕೊಂಡಿರೋ ತೆಲುಗು ಪವರ್​ಸ್ಟಾರ್​​ ಮತ್ತು ರಾಜಕಾರಣಿ ಪವನ್​​ಕಲ್ಯಾಣ್ ಒಟ್ಟು 2 ಕೋಟಿ ರೂಪಾಯಿ ದೇಣಿಗೆ ಮಾಡಿದ್ದಾರೆ. ತೆಲಂಗಾಣ ಮತ್ತು ಆಂಧ್ರಪ್ರದೇಶ ಸಿಎಂ ಪರಿಹಾರ ನಿಧಿಗೆ ತಲಾ 50 ಲಕ್ಷ ರೂಪಾಯಿ ನೀಡಿದ್ದಾರೆ. ಜೊತೆಗೆ ಪ್ರಧಾನ ಮಂತ್ರಿ ಪರಿಹಾರ ನಿಧಿಗೆ 1 ಕೋಟಿ ರೂಪಾಯಿ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪವನ್ ಕಲ್ಯಾಣ್​​, ಆಂಧ್ರಪ್ರದೇಶ ಮತ್ತು ತೆಲಂಗಾಣ ಸಿಎಂ ಪರಿಹಾರ ನಿಧಿಗೆ ಕೊರೋನಾ ವಿರುದ್ಧ ಹೋರಾಟಕ್ಕಾಗಿ ತಲಾ 50 ಲಕ್ಷ ರೂಪಾಯಿ ದೇಣಿಗೆ ನೀಡಿದ್ದೇನೆ. ಅದೇ ರೀತಿ ಇಂಥ ಪರಿಸ್ಥಿತಿಯನ್ನು ಎದುರಿಸಲು ಉತ್ತಮ ನಾಯಕ ಮೋದಿಯವರಿಗೆ ಸಹಾಯ ಮಾಡುವ ಉದ್ದೇಶದಿಂದ ಪ್ರಧಾನಮಂತ್ರಿ ಪರಿಹಾರ ನಿಧಿಗೂ 1 ಕೋಟಿ ರೂಪಾಯಿ ದೇಣಿಗೆ ನೀಡಿದ್ದೇನೆ ಎಂದು ಬರೆದುಕೊಂಡಿದ್ದಾರೆ.

-masthmagaa.com

Contact Us for Advertisement

Leave a Reply