ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 121ಕ್ಕೆ ಏರಿಕೆ..!

masthmagaa.com:

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 121ಕ್ಕೆ ಏರಿಕೆಯಾಗಿದೆ ಅಂತ ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ಅಲ್ಲದೆ ದೆಹಲಿಯ ನಿಜಾಮುದ್ದಿನ್ ಮರ್ಕಝ್​ನಲ್ಲಿ ನಡೆದ ತಬ್ಲಿಘಿ ಜಮಾತ್​ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಂದ 362 ಜನರ ಮೇಲೆ ತೀವ್ರ ನಿಗಾ ಇಡಲಾಗಿದೆ. ಈ ಪೈಕಿ 27 ಜನ ಬೀದರ್​ ಜಿಲ್ಲೆಯವರೇ ಇದ್ದು, 11 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಉಳಿದ 16 ಜನರ ಕೊರೋನಾ ಪರೀಕ್ಷಾ ವರದಿ ಬರಬೇಕಿದೆ ಅಂತ ಸಚಿವ ಶ್ರೀರಾಮುಲು ಹೇಳಿದ್ದಾರೆ.

ಗಡಿ‌ ಜಿಲ್ಲೆ ಬೀದರ್‌ನಲ್ಲಿ ನಿಜಾಮುದ್ದೀನ್ ಜಮಾತ್ ತಲ್ಲಣ ಸೃಷ್ಟಿಸಿರುವ ಹಿನ್ನೆಲೆ ಸೋಂಕಿತರು ಇರುವ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗುತ್ತಿದೆ ಹಾಗೂ ಇವರು ಸಂಪರ್ಕಿಸಿದ ಜನರ ಪತ್ತೆ ಕಾರ್ಯ ಮುಂದುವರಿದಿದೆ ಅಂತ ಜಿಲ್ಲಾಧಿಕಾರಿ ಡಾ. ಮಹಾದೇವ ಹೇಳಿದ್ದಾರೆ.

ರಾಜ್ಯದಲ್ಲಿ ಕೊರೋನಾ ಸೋಂಕಿಗೆ ಇದುವರೆಗೆ ಮೂವರು ಮೃತಪಟ್ಟಿದ್ದಾರೆ. ಕಲಬುರಗಿ, ಚಿಕ್ಕಬಳ್ಳಾಪುರ ಹಾಗೂ ತುಮಕೂರಿನಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

-masthmagaa.com

Contact Us for Advertisement

Leave a Reply