ರಾಜ್ಯದಲ್ಲಿ 15ಕ್ಕೇರಿದ ಕೊರೋನಾ ಪೀಡಿತರ ಸಂಖ್ಯೆ..! ಕೊಡಗಲ್ಲಿ ಹೊಸ ಕೇಸ್

masthmagaa.com:
ಮಡಿಕೇರಿ: ಕರ್ನಾಟಕದಲ್ಲಿ ಕೊರೋನಾ ಸೋಂಕುಪೀಡಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಶ್ರೀರಾಮುಲು, ಇಂದು ಕೊಡಗಿನಲ್ಲಿ ಮೊದಲ ಕೊರೋನಾ ಸೋಂಕು ಪ್ರಕರಣ ಪತ್ತೆಯಾಗಿದೆ. ಈ ವ್ಯಕ್ತಿಯು ಸೌದಿ ಅರೇಬಿಯಾ ಪ್ರವಾಸದಿಂದ ಹಿಂದಿರುಗಿದ್ದರು. ಇವರನ್ನು ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಿ ನಿಗಾ ವಹಿಸಲಾಗಿದೆ. ಇದು ಕರ್ನಾಟಕದ 15ನೇ ಕೊರೋನಾ ಪ್ರಕರಣವಾಗಿದೆ ಅಂತ ಮಾಹಿತಿ ನೀಡಿದ್ದಾರೆ. 
ಜೊತೆಗೆ ಇವರು ಸೌದಿ ಅರೇಬಿಯಾದಿಂದ ಬೆಂಗಳೂರಿಗೆ ಬಂದು ಬಸ್​ನಲ್ಲಿ ಮಡಿಕೇರಿಗೆ ಹೋಗಿರೋದ್ರಿಂದ ಸಹ ಪ್ರಯಾಣಿಕರನ್ನ ಸಹ ಪರೀಕ್ಷೆಗೆ ಒಳಪಡಿಸುವ ಸಾಧ್ಯತೆ ಇದೆ.
-masthmagaa.com
Contact Us for Advertisement

Leave a Reply