masthmagaa.com:

ಹರಿದ್ವಾರದಲ್ಲಿ ಮುಂದಿನ ವರ್ಷ ಜನವರಿ 14ರಂದು ಆರಂಭವಾಗಲಿರುವ ಕುಂಭಮೇಳದಲ್ಲಿ ಗಂಗಾನದಿಯಲ್ಲಿ ಪವಿತ್ರ ಸ್ನಾನ ಮಾಡುವ ಮುನ್ನ ಪ್ರತಿಯೊಬ್ಬರು ಕಡ್ಡಾಯವಾಗಿ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಬೇಕು ಅಂತ ಉತ್ತರಾಖಂಡ್‌ ಸಿಎಂ ತ್ರಿವೇಂದ್ರ ಸಿಂಗ್‌ ರಾವತ್‌ ಹೇಳಿದ್ದಾರೆ.

ಕುಂಭಮೇಳ ನಡೆಯುವುದಾಗಿ ನಿನ್ನೆಯಷ್ಟೇ ಮಾಹಿತಿ ನೀಡಿದ್ದ ಸಿಎಂ, ಅದ್ರ ಸಿದ್ಧತೆ ಕುರಿತು ರಾಜ್ಯದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಅಗತ್ಯ ಕ್ರಮಗಳನ್ನ ಕೈಗೊಳ್ಳುವಂತೆ ಸಲಹೆ ನೀಡಿದ್ದಾರೆ. ಈ ಕಾರ್ಯಕ್ರಮಕ್ಕೆ ಆಗಮಿಸುವವರು ಪೋರ್ಟಲ್‌ನಲ್ಲಿ ಹೆಸರು ನೋಂದಣಿ ಮಾಡಲು ವ್ಯವಸ್ಥೆ ಮಾಡಬೇಕು, ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ರೀನಿಂಗ್‌, ಅನಾರೋಗ್ಯ ಸಂಬಂಧಿತ ಪರೀಕ್ಷೆ ನಡೆಸಬೇಕು. ಹಾಗೂ ಕೊರೋನಾ ಪರೀಕ್ಷೆ ನಡೆಸಿದ ಬಳಿಕವಷ್ಟೇ ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಲು ಅವಕಾಶ ಮಾಡಿಕೊಡಬೇಕು ಅಂತ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

-masthmagaa.com

Contact Us for Advertisement

Leave a Reply