masthmagaa.com:
ಆದಾಯಕ್ಕೂ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಸುಪ್ರೀಂಕೋರ್ಟ್ನಲ್ಲೂ ಬಿಗ್ ರಿಲೀಫ್ ಸಿಕ್ಕಿದೆ. ಡಿಕೆ ಶಿವಕುಮಾರ್ ವಿರುದ್ಧದ ತನಿಖೆಗೆ ತಡೆಯಾಜ್ಞೆ ತೆರವು ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಡಿಕೆ ಶಿವಕುಮಾರ್ ವಿರುದ್ಧದ ಆದಾಯಕ್ಕೂ ಮೀರಿ ಆಸ್ತಿಗಳಿಕೆ ಕೇಸ್ನ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಇದನ್ನ ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿತ್ತು. ಆದ್ರೆ, ಸುಪ್ರೀಂಕೋರ್ಟ್ ಸಿಬಿಐ ಅರ್ಜಿಯನ್ನ ವಜಾಗೊಳಿಸಿ ಆದೇಶ ಹೊರಡಿಸಿದೆ.
-masthmagaa.com
Contact Us for Advertisement