ಖಾಸಗಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ: ಡಿಕೆ ಶಿವಕುಮಾರ್

masthmagaa.com:

ನೀರಿನ ಕೊರತೆ ಎದುರಿಸ್ತಿರೊ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಖಾಸಗಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತದೆ ಅಂತ ಬೆಂಗಳೂರು ನಗರಾಭಿವೃದ್ದಿ ಸಚಿವ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಖಾಸಗಿ ನೀರು ಸರಬರಾಜುದಾರರು ಸಾರ್ವಜನಿಕರಿಂದ ಮನ ಬಂದಂತೆ ಹಣ ವಸೂಲಿ ಮಾಡ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ನಮ್ಮ ಸರ್ಕಾರ ಮುಂದಾಗಿದೆ. ಹೀಗಾಗಿ ಸಾರ್ವಜನಿಕರಿಗೆ ನೀರು ಪೂರೈಕೆ ಸಂಬಂಧ ಮಾರ್ಚ್‌ 7 ರ ಒಳಗೆ ತಮ್ಮ ಹೆಸರನ್ನ ನೊಂದಾಯಿಸಲು ಖಾಸಗಿ ಟ್ಯಾಂಕರ್‌ಗಳ ಮಾಲೀಕರಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಈ ನಿಟ್ಟಿನಲ್ಲಿ ನೀರಿನ ಸಮಸ್ಯೆ ನಿವಾರಿಸಲು ರಾಜ್ಯ ಸರ್ಕಾರ ಬೆಂಗಳೂರು ವ್ಯಾಪ್ತಿಗೆ ಬರೋ ಪ್ರತಿಯೊಂದು ವಿಧಾನಸಭಾ ಕ್ಷೇತ್ರಕ್ಕೂ ತಲಾ 10 ಕೋಟಿ ರೂಪಾಯಿ ಅನುದಾನ ನೀಡಲಿದೆ ಅಂತ ಡಿಕೆಶಿ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply