ದಕ್ಷಿಣ ಕನ್ನಡ: ಬಜರಂಗ ದಳ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್‌ ಬೆಂಬಲಿಗರಿಂದ ಹಲ್ಲೆ!

masthmagaa.com:

ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಬಂದು ಸರ್ಕಾರ ರಚನೆಯಾದ್ರು, ಇನ್ನೂ ಫಲಿತಾಂಶದ ದ್ವೇಷದಿಂದ ಪರಸ್ಪರ ಹೊಡೆದಾಡುತ್ತಿರುವ ಘಟನೆಗಳು ಮುಂದುವರೆದಿವೆ. ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ ಬಜರಂಗ ದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರಿನಿಂದ ದಾಳಿ ನಡೆಸಲಾಗಿದೆ. ಘಟನೆಯಲ್ಲಿ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಈ ಬಗ್ಗೆ ಕೇಸ್‌ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗ್ತಿದೆ ಅಂತ ಪೊಲೀಸರು ತಿಳಿಸಿದ್ದಾರೆ. ಅಂದ್ಹಾಗೆ ಈ ದಾಳಿಯನ್ನ ಕಾಂಗ್ರೆಸ್‌ ನಾಯಕರು ನಡೆಸಿದ್ದಾರೆ ಅಂತ ಶಂಕಿಸಲಾಗಿದೆ.

-masthmagaa.com

Contact Us for Advertisement

Leave a Reply