masthmagaa.com:
ದೇಶಾದ್ಯಂತ ಭಾರಿ ಸದ್ದು ಮಾಡಿದ್ದ ಕೇರಳ ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣದ ಆರೋಪಿಗಳು ಮೋಸ್ಟ್ ವಾಂಟೆಡ್ ಉಗ್ರ ದಾವುದ್ ಇಬ್ರಾಹಿಂನ ‘ಡಿ-ಕಂಪನಿ’ (ದಾವುದ್ನ ಗ್ಯಾಂಗ್) ಜೊತೆ ಸಂಪರ್ಕ ಹೊಂದಿರುವ ಬಗ್ಗೆ ರಾಷ್ಟ್ರೀಯ ತನಿಖಾ ದಳ (National Investigation Agency-NIA) ಅನುಮಾನ ವ್ಯಕ್ತಪಡಿಸಿದೆ. ಈ ಬಗ್ಗೆ ತನಿಖೆ ನಡೆಸಬೇಕು ಅಂತಾನೂ ಎನ್ಐಎ ವಿಶೇಷ ಕೋರ್ಟ್ಗೆ ಸಲ್ಲಿಸಿದ ವರದಿಯಲ್ಲಿ ತಿಳಿಸಿದೆ.
ಪ್ರಕರಣದ 7 ಆರೋಪಿಗಳು ಜಾಮೀನಿಗಾಗಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಎನ್ಐಎ, ಆರೋಪಿಗಳು ಡಿ-ಕಂಪನಿ ಜೊತೆ ಲಿಂಕ್ ಹೊಂದಿರುವ ಸಾಧ್ಯತೆ ಇದೆ. ಹೀಗಾಗಿ ಪ್ರಕರಣದಲ್ಲಿ ಉಗ್ರ ಲಿಂಕ್ ಬಗ್ಗೆಯೂ ತನಿಖೆ ನಡೆಸುವ ಅವಶ್ಯಕತೆ ಇದೆ. ಚಿನ್ನ ಕಳ್ಳಸಾಗಣೆಯಿಂದ ಬಂದ ಹಣವನ್ನ ದೇಶ ವಿರೋಧಿ ಮತ್ತು ಉಗ್ರ ಚಟುವಟಿಕೆಗಳಿಗೆ ಬಳಸಲಾಗುತ್ತಿತ್ತುಅಂತ ಗುಪ್ತಚರ ಮಾಹಿತಿ ಸಿಕ್ಕಿದೆ ಅಂತ ಎನ್ಐಎ ಕೋರ್ಟ್ಗೆ ತಿಳಿಸಿದೆ.
ಈ ವರ್ಷದ ಜುಲೈನಲ್ಲಿ ಸುಮಾರು 30 ಕೆ.ಜಿ.ಯಷ್ಟು ಚಿನ್ನವನ್ನು ರಾಜತಾಂತ್ರಿಕ ಮಾರ್ಗದ ಮೂಲಕ ವಿದೇಶದಿಂದ ಕಳ್ಳಸಾಗಣೆ ಮಾಡಲಾಗಿತ್ತು ಅನ್ನೋ ಆರೋಪವಿದೆ. ಇಷ್ಟು ಪ್ರಮಾಣದ ಚಿನ್ನವನ್ನು ಅಂದು ಕೇರಳದ ತಿರುವನಂತಪುರಂ ಏರ್ಪೋರ್ಟ್ನಲ್ಲಿ ಜಪ್ತಿ ಮಾಡಲಾಗಿತ್ತು. ಅದಾದ ಬಳಿಕ ಈ ಪ್ರಕರಣ ಕೇರಳ ರಾಜಕೀಯದಲ್ಲಿ ಭಾರಿ ಬಿರುಗಾಳಿಯನ್ನೇ ಎಬ್ಬಿಸಿದೆ. ಇದೀಗ ಪ್ರಕರಣದಲ್ಲಿ ದಾವುದ್ ಇಬ್ರಾಹಿಂ ಗ್ಯಾಂಗ್ನ ಲಿಂಕ್ ಇರುವ ಬಗ್ಗೆ ಎನ್ಐಎ ಅನುಮಾನ ವ್ಯಕ್ತಪಡಿಸಿರೋದ್ರಿಂದ ಪ್ರಕರಣ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.
-masthmagaa.com
Contact Us for Advertisement