masthmagaa.com:
ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಎಸ್ಎಸ್ಎಲ್ಸಿ ಪರೀಕ್ಷೆ ಬಗ್ಗೆ ಮಾರ್ಚ್ 23ರಂದು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಅಂತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಆರೋಗ್ಯ ಸಚಿವರು ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಜೊತೆ ಚರ್ಚೆ ನಡೆಸಿ ಪರಿಸ್ಥಿತಿಯನ್ನ ಅವಲೋಕಿಸಲಾಗುವುದು. ಜೊತೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೂ ಚರ್ಚಿಸುತ್ತೇವೆ. ಬಳಿಕ ಪರೀಕ್ಷೆಗಳ ಬಗ್ಗೆ ಅಂತಿಮ ತೀರ್ಮಾನ ಪ್ರಕಟಿಸಲಾಗುವುದು ಎಂದಿದ್ದಾರೆ.
ಇತ್ತೀಚೆಗಷ್ಟೇ ಎಲ್ಲಾ ರೀತಿಯ ಪರೀಕ್ಷೆ ಹಾಗೂ ಪ್ರವೇಶ ಪರೀಕ್ಷೆಗಳನ್ನ ಮಾರ್ಚ್ 31ರವರೆಗೆ ಮುಂದೂಡುವಂತೆ ಕೇಂದ್ರ ಸರ್ಕಾರ ಸೂಚಿಸಿತ್ತು. ಆದ್ರೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಅಂತ ರಾಜ್ಯ ಸರ್ಕಾರ ಹೇಳಿತ್ತು. ಆದ್ರೀಗ ಕೊರೋನಾ ಭೀತಿ ಹೆಚ್ಚಾಗಿರುವ ಹಿನ್ನೆಲೆ ಪರೀಕ್ಷೆಗಳ ಬಗ್ಗೆ ಮಾರ್ಚ್ 23ರಂದು ಅಂತಿಮ ನಿರ್ಧಾರ ಪ್ರಕಟಿಸಲು ರಾಜ್ಯ ಸರ್ಕಾರ ಮುಂದಾಗಿದೆ.
-masthmagaa.com
Contact Us for Advertisement