masthmagaa.com:
ವಿಧಾನಸಭಾ ಚುನಾವಣೆಯಲ್ಲಿ ನಕಲಿ ಮತದಾನ ಮಾಡಿಸಿದ್ದಾರೆ ಅಂತ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ರಾಷ್ಟ್ರಪತಿಗೆ ದೂರು ಸಲ್ಲಿಸಲಾಗಿದೆ. ವಿಜಯಪುರ ಡಿಸಿ ಮೂಲಕ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರಫ್ ರಾಷ್ಟ್ರಪತಿ ಅವ್ರಿಗೆ ದೂರು ನೀಡಿದ್ದಾರೆ. ಯತ್ನಾಳ್ ಅಧ್ಯಕ್ಷರಾಗಿರುವ ಸಿದ್ಧಸಿರಿ ಸಂಸ್ಥೆಯ ಬ್ಯಾಂಕ್ ಸಿಬ್ಬಂದಿ, ಸಕ್ಕರೆ ಕಾರ್ಖಾನೆ ಸಿಬ್ಬಂದಿ ಹೆಸರಲ್ಲಿ ನಕಲಿ ಮತದಾನ ಮಾಡಿಸಿದ್ದಾರೆ. ನಕಲಿ ಮತದಾನದ ಬಗ್ಗೆ ಸಾಕ್ಷಿ ನೀಡಿದರು ಕ್ರಮ ಕೈಗೊಂಡಿಲ್ಲ. ಇದರಲ್ಲಿ ಕೆಲ ಅಧಿಕಾರಿಗಳು ಕೂಡ ಶಾಮೀಲಾಗಿದ್ದಾರೆ. ಹೀಗಾಗಿ ಅವ್ರ ವಿರುದ್ಧವೂ ಕ್ರಮ ಕೈಗೊಳ್ಳಿ ಅಂತ ಮುಶ್ರಫ್ ಆಗ್ರಹಿಸಿದ್ದಾರೆ.
-masthmagaa.com
Contact Us for Advertisement