masthmagaa.com:
ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ WFI ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ರನ್ನು ಬಂಧಿಸುವಂತೆ ಒತ್ತಾಯಿಸಿ ಕಳೆದ 12 ದಿನಗಳಿಂದ ಕುಸ್ತಿಪಟುಗಳ ಪ್ರತಿಭಟನೆ ನಡಸುತ್ತಿದ್ದಾರೆ. ಇದೀಗ ಕುಸ್ತಿಪಟುಗಳಿಗೆ ಬೆಂಬಲ ಸೂಚಿಸಿರುವ Samyukta Kisan Morcha (SKM) ರೈತ ಸಂಘಟನೆ ದೇಶಾದ್ಯಂತ ಪ್ರತಿಭಟನೆ ನಡೆಸೋದಾಗಿ ಅನೌನ್ಸ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿರುವ ದೆಹಲಿಯ ಜಂತರ್ ಮಂತರ್ನಲ್ಲಿ ಪೊಲೀಸ್ ಬಿಗಿ ಭದ್ರತೆಯನ್ನ ಹೆಚ್ಚಿಸಲಾಗಿದೆ. ಇತ್ತ ನನ್ನ ಮೇಲಿರುವ ಒಂದೇ ಒಂದು ಆರೋಪ ಸಾಬೀತಾದರೂ ನಾನು ನೇಣು ಹಾಕಿಕೊಳ್ತೇನೆ ಅಂತ ಬ್ರಿಜ್ ಭೂಷಣ್ ಹೇಳಿದ್ದಾರೆ.
-masthmagaa.com
Contact Us for Advertisement