1.30 ಕೋಟಿ ಹಣ ಸಾಗಿಸುತ್ತಿದ್ದವನು ಅಂದರ್​..! ದುಡ್ಡು ಯಾವ ಪಕ್ಷದ್ದು..?

ದೆಹಲಿ: ಇಲ್ಲಿನ ಗುರುಗ್ರಾಮದಲ್ಲಿ 1.30 ಕೋಟಿ ರೂಪಾಯಿ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬ ಅರೆಸ್ಟ್ ಆಗಿದ್ದಾನೆ. ಹರಿಯಾಣದಲ್ಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿದ್ದು, ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಮೊತ್ತದ ಹಣ ಸೀಜ್ ಮಾಡಲಾಗಿದೆ ಅಂತ ಪೊಲೀಸರು ಮಾಹಿತಿ ನೀಡಿದ್ದಾರೆ. ಅಲ್ಲದೆ ಕಾರ್ ಚಾಲಕನನ್ನು ದಿವೀಶ್ ಎಂದು ಗುರುತಿಸಲಾಗಿದ್ದು, ಯಾವ ಕಾರಣಕ್ಕಾಗಿ ಹಣ ಸಾಗಿಸುತ್ತಿದ್ದ ಅನ್ನೋದು ಇನ್ನೂ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಆದ್ರೆ ಮೇಲ್ನೋಟಕ್ಕೆ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಮತದಾರರಿಗೆ ಹಂಚಲು ಈ ಹಣ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.

ಇದೇ ಅಕ್ಟೋಬರ್ 21ರಂದು ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಅ.24ರಂದು ಫಲಿತಾಂಶ ಹೊರಬೀಳಲಿದೆ.

Contact Us for Advertisement

Leave a Reply