masthmagaa.com:
ದೆಹಲಿ: ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರಿಗೆ ಕೊರೋನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ. ಕಳೆದ ರಾತ್ರಿ ವಿಪರೀತ ಜ್ವರ ಮತ್ತು ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆ ಅವರನ್ನು ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಸಚಿವರ ಕೊರೋನಾ ಪರೀಕ್ಷೆ ನಡೆಸಲಾಗಿದ್ದು ವರದಿಗಾಗಿ ಕಾಯಲಾಗುತ್ತಿದೆ.
ಸತ್ಯೇಂದರ್ ಜೈನ್ ಅವರು ಜೂನ್ 14ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಮತ್ತು ಉನ್ನತ ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಭಾಗವಹಿಸಿದ್ರು. ಹೀಗಾಗಿ ಸತ್ಯೇಂದರ್ ಜೈನ್ ಅವರಿಗೆ ಸೋಂಕು ದೃಢಪಟ್ಟರೆ ಆ ಸಭೆಯಲ್ಲಿ ಭಾಗವಹಿಸಿದ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಬೇಕಾಗುತ್ತದೆ.
ಈ ಬಗ್ಗೆ ಮಾತನಾಡಿರೋ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಕೊರೋನಾ ಸೋಂಕು ತಗುಲಿರೋದು ಇನ್ನೂ ದೃಢಪಟ್ಟಿಲ್ಲ.ಅವರ ಕೊರೋನಾ ಪರೀಕ್ಷೆಯ ರಿಪೋರ್ಟ್ಗಾಗಿ ಕಾಯುತ್ತಿದ್ದೇವೆ ಎಂದಿದ್ದಾರೆ.
-masthmagaa.com
Contact Us for Advertisement