masthmagaa.com:
ದೆಹಲಿ: ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರಿಗೆ ಕೊರೋನಾ ಸೋಂಕು ತಗುಲಿಲ್ಲ ಅನ್ನೋದು ದೃಢಪಟ್ಟಿದೆ. ಕಳೆದ ರಾತ್ರಿ ವಿಪರೀತ ಜ್ವರ ಮತ್ತು ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆ ಅವರನ್ನು ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಕೊರೋನಾ ಪರೀಕ್ಷೆ ನಡೆಸಲಾಗಿತ್ತು. ಇದೀಗ ಅದರ ವರದಿ ಬಂದಿದ್ದು ಕೊರೋನಾ ಸೋಂಕು ತಗುಲಿಲ್ಲ ಅನ್ನೋದು ಗೊತ್ತಾಗಿದೆ. ಸದ್ಯ ಅವರಿಗೆ ಜ್ವರ ಇದ್ದರೂ ಆರೋಗ್ಯ ಸ್ಥಿರವಾಗಿದೆ ಅಂತ ವೈದ್ಯರು ಹೇಳಿದ್ದಾರೆ.
ಸತ್ಯೇಂದರ್ ಜೈನ್ ಅವರು ಜೂನ್ 14ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಮತ್ತು ಉನ್ನತ ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಭಾಗವಹಿಸಿದ್ರು. ಹೀಗಾಗಿ ಸಾಕಷ್ಟು ಆತಂಕ ಮನೆ ಮಾಡಿತ್ತು. ಆದ್ರೀಗ ಸಭೆಯಲ್ಲಿ ಭಾಗವಹಿಸಿದ್ದ ಎಲ್ಲರೂ ನಿರಾಳರಾಗಿದ್ದಾರೆ.
-masthmagaa.com
Contact Us for Advertisement