masthmagaa.com:
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ದೇವನಹಳ್ಳಿಯನ್ನ ಜಿಲ್ಲಾ ಕೇಂದ್ರವನ್ನಾಗಿ ಮಾಡಲಾಗುತ್ತೆ ಅಂತ ಜಿಲ್ಲೆಯ ಉಸ್ತುವಾರಿ ಸಚಿವ ಡಾ.ಸುಧಾಕರ್ ಅನೌನ್ಸ್ ಮಾಡಿದ್ದಾರೆ. ಅಲ್ದೇ ಮುಂದಿನ 1 ತಿಂಗಳಿನಲ್ಲಿ ರಾಜ್ಯ ಸರ್ಕಾರದಿಂದ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲಾಗುತ್ತೆ ಅಂತ ಹೇಳಿದ್ದಾರೆ. ಈ ಮೂಲಕ ಹಲವು ದಿನಗಳಿಂದ ಇದ್ದ ಗೊಂದಲ ಕಡೆಗೂ ಶಮನವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ದೊಡ್ಡಬಳ್ಳಾಪುರ ಅಥವಾ ದೇವನಹಳ್ಳಿಯನ್ನ ಜಿಲ್ಲಾ ಕೇಂದ್ರವನ್ನಾಗಿ ಮಾಡ್ಬೇಕು ಅಂತ ಬಹುದಿನಗಳಿಂದ ಕೂಗು ಕೇಳಿ ಬಂದಿತ್ತು. ಕಡೆಗೂ ಜಿಲ್ಲಾಕೇಂದ್ರದ ಸ್ಥಾನ ದೇವನಹಳ್ಳಿಯ ಪಾಲಾಗಿದೆ.
-masthmagaa.com
Contact Us for Advertisement