‘ಬಾಂಡ್ ರವಿ’ ಪ್ರಮೋದ್ ಬೆನ್ನುತಟ್ಟಿದ ಧೃವ- ವಿನೋದ್!

masthmagaa.com:

ಸ್ಯಾಂಡಲ್ ವುಡ್ ನ ಪ್ರತಿಭಾನ್ವಿತ ನಾಯಕ ನಟ ಪ್ರಮೋದ್ ನಾಯಕನಾಗಿ ನಟಿಸ್ತಿರುವ ಬಾಂಡ್ ರವಿ ಸಿನಿಮಾಗೆ ಪೊಗರು ಪೋರ ಧ್ರುವ ಹಾಗೂ ಯಂಗ್ ಟೈಗರ್ ವಿನೋದ್ ಪ್ರಭಾಕರ್ ಸಾಥ್ ಕೊಟ್ಟಿದ್ದಾರೆ. ಇವತ್ತು ಸಿನಿಮಾದ ಮುಹೂರ್ತ ಸಮಾರಂಭಕ್ಕೆ ಆಗಮಿಸಿದ ಧ್ರುವ-ವಿನೋದ್ ಪ್ರಮೋದ್ ಬೆನ್ನುತಟ್ಟಿ ಇಡೀ ಸಿನಿಮಾ ಟೀಂಗೆ ಶುಭಾಶಯ ತಿಳಿಸಿದರು.

ಬಾಂಡ್ ರವಿ ಸಿನಿಮಾಗೆ ವಿನೋದ್ ಪ್ರಭಾಕರ್ ಕ್ಲ್ಯಾಪ್ ಮಾಡಿದ್ರೆ, ಧ್ರುವ ಸರ್ಜಾ ಕ್ಯಾಮೆರಾಗೆ ಚಾಲನೆ ನೀಡಿದರು. ಬಳಿಕ ಮಾತಿಗಿಳಿದ ವಿನೋದ್, ಧ್ರುವ ನನ್ನ ತಮ್ಮ. ನನ್ನ ಕಡೆಯಿಂದ ಕ್ಲ್ಯಾಪ್ ಮಾಡಿಸಿದ್ದಕ್ಕೆ ಧನ್ಯವಾದ. ಇಡೀ ತಂಡಕ್ಕೆ ಒಳ್ಳೆದಾಗಲಿ ಎಂದರು. ಬಳಿಕ ಧ್ರುವ ಸರ್ಜಾ, ವಿನೋದ್ ಪ್ರಭಾಕರ್ ನಮ್ಮಣ್ಣ ಎನ್ನುತ್ತಾ, ಸಿನಿಮಾದ ಟೈಟಲ್ ಕೇಳಿದ್ರಿ ಫೀಲ್ಡ್ ಸಿನಿಮಾ ಅನಿಸುತ್ತದೆ. ಇದು ಪ್ರಾಮಿಸಿಂಗ್ ಸಿನಿಮಾ. ಪ್ರತಿಯೊಬ್ಬರಿಗೂ ಪ್ರೋತ್ಸಾಹ ಮಾಡಬೇಕು ಅಂತಾ ನೆಗೆಟಿವ್ ಕಮೆಂಟ್ ಮಾಡುವವರಿಗೆ ವಾರ್ನಿಂಗ್ ಕೊಟ್ರು.

ಪ್ರಮೋದ್, ನಾನು ಅಪ್ಪು ಸರ್ ಅಭಿಮಾನಿಯಾಗಿ ಬಾಂಡ್ ರವಿ ಸಿನಿಮಾದಲ್ಲಿ ನಟಿಸ್ತಿದ್ದೇನೆ. ಅಣ್ಣಾ ಬಾಂಡ್ ಸಿನಿಮಾದಲ್ಲಿ ಅಪ್ಪು ಸರ್ ಮಿಂಚಿದ್ದ ಬಾಂಡ್ ರವಿ ಪಾತ್ರದ ರೀತಿ ಇರುತ್ತದೆ. ಹೀಗಾಗಿ ಅಪ್ಪು ಸರ್ ಮ್ಯಾನರಿಸಂ, ಆಕ್ಟಿಂಗ್ ಖದರ್ ನ್ನು ನೋಡಿ‌ ಕಲಿಯುತ್ತಿದ್ದೇನೆ. ಒಳ್ಳೆ ಪ್ರೊಡಕ್ಷನ್ ಹೌಸ್, ಒಳ್ಳೆ ಫ್ಯಾಷನ್ ಪ್ರೊಡ್ಯೂಸರ್ ಎಂದರು. ಮಾಯಕನ್ನಡಿ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದ ಕಾಜಲ್ ಕುಂದರ್ ನಾಯಕಿಯಾಗಿ ಸಿನಿಮಾದಲ್ಲಿ ನಟಿಸ್ತಿದ್ದಾರೆ.

ಕಳೆದ‌ ಹನ್ನೊಂದು ವರ್ಷದಿಂದ ನಿರ್ದೇಶನದ ವಿಭಾಗದಲ್ಲಿ ಕೆಲಸ ಮಾಡಿರುವ ಪ್ರಜ್ವಲ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳ್ತಿದ್ದು, ಯುಗಾದಿ ಹಬ್ಬಕ್ಕೆ ಫಸ್ಟ್ ಲುಕ್ ರಿಲೀಸ್ ಮಾಡಲಾಗಿತ್ತು.
ಅಂದಹಾಗೇ ಬಾಂಡ್ ರವಿ ಕಮರ್ಷಿಯಲ್ ಎಮೋಷನಲ್ ಥ್ರಿಲ್ಲರ್ ಜಾನರ್ ಸಿನಿಮಾವಾಗಿದ್ದು, ಲೈಫ್ ಲೈನ್ ಫಿಲ್ಮಸ್ ಬ್ಯಾನರ್ ನಡಿ ನರಸಿಂಹಮೂರ್ತಿ ಬಂಡವಾಳ ಹೂಡ್ತಿದ್ದು, ಈ‌ ಹಿಂದೆ ನರಸಿಂಹಮೂರ್ತಿ ಮಾದ ಮನಸಿ ಸಿನಿಮಾ ನಿರ್ಮಾಣ ಮಾಡಿದ್ದರು.

ಮಲ್ಲಿಕಾರ್ಜುನ್ ಕಾಶಿ ಹಾಗೂ ಝೇವಿಯರ್ ಫರ್ನಾಂಡಿಸ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತಕೊಂಡಿದ್ದಾರೆ. ರವಿಕಾಳೆ, ಧರ್ಮ, ವಿಜಯ್ ಚೆಂಡೂರ್, ಶೋಭರಾಜ್ ಮುಖ್ಯ ಭೂಮಿಕೆಯಲ್ಲಿ ನಟಿಸ್ತಿದ್ದು, ಕೆಎಸ್ ಚಂದ್ರಶೇಖರ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಸುನಿಲ್&ದೇವರಾಜ್ ಸಂಭಾಷಣೆ, ಮನೋಮೂರ್ತಿ ಸಂಗೀತ ಸಿನಿಮಾಕ್ಕಿದೆ ಜಯಂತ್ ಕಾಯ್ಕಿಣಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದಾರೆ.ನಾಳೆಯಿಂದ ಶೂಟಿಂಗ್ ನಡೆಯುತ್ತಿದ್ದು, ಬೆಂಗಳೂರು, ಶಿವಮೊಗ್ಗ, ಕೊಡಚಾದ್ರಿ ಸುತ್ತಮುತ್ತ ಐವತ್ತು ದಿನಗಳ ಕಾಲ ಶೂಟಿಂಗ್ ಮಾಡಲು ಚಿತ್ರತಂಡ ಪ್ಲ್ಯಾನ್ ಹಾಕಿದೆ.

-masthmagaa.com

Contact Us for Advertisement

Leave a Reply