ವಂಚನೆ ಮಾಡಿದ್ದು ನಿಜ ಎಂದು ಒಪ್ಪಿಕೊಂಡ್ರಾ ಚೈತ್ರ ಕುಂದಾಪುರ?

masthmagaa.com:

ಟಿಕೆಟ್‌ ವಂಚನೆ ಕೇಸ್‌ಗೆ ಸಂಬಂಧಿಸಿಧಂತೆ ಆರೋಪಿ ಚೈತ್ರಾ ಕುಂದಾಪುರ ತಮ್ಮ ತಪ್ಪನ್ನ ಒಪ್ಪಿಕೊಂಡಿದ್ದಾರೆ ಅಂತ ತಿಳಿದು ಬಂದಿದೆ. ಈ ಮೂಲಕ 5 ಕೋಟಿ ರೂಪಾಯಿ ವಂಚನೆ ಕೇಸ್‌ಗೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ಇದಕ್ಕೂ ಮೊದಲು ಹಿರೇಹಡಗಲಿ ಮಠದ ಸ್ವಾಮೀಜಿ ಹಾಲಶ್ರೀ ಅನ್ನೋರು ಸಿಗಲಿ, ಆಗ ದೊಡ್ಡ ದೊಡ್ಡವರ ಹೆಸರೇ ಹೊರಬರುತ್ತೆ ಅಂತ ಚೈತ್ರ ಹೇಳಿದ್ದರು. ಜೊತೆಗೆ ತನ್ನನ್ನ ಬಲವಂತವಾಗಿ ಫಿಕ್ಸ್ ಮಾಡಲಾಗಿದೆ ಅಂತ ಆರೋಪಿಸಿದ್ದರು. ಇದೀಗ ಹಾಲಶ್ರೀ ಮುಂದೆ ಚೈತ್ರಾರನ್ನ ಕೂರಿಸಿ ವಿಚಾರಣೆ ಮಾಡಿದಾಗ ಶ್ರೀಕಾಂತ್ ಪೂಜಾರಿ ಜೊತೆ ಸೇರಿ ವಂಚನೆಗೆ ಪ್ಲ್ಯಾನ್ ಮಾಡಿದ್ದಾಗಿ ಹೇಳಿದ್ದಾರೆ. ಸಾಕ್ಷ್ಯಗಳನ್ನು ಮುಂದಿಟ್ಟು ಪ್ರಶ್ನೆ ಮಾಡಿದಾಗ ಚೈತ್ರಾ ತಪ್ಪೊಪ್ಪಿಕೊಂಡಿದ್ದಾರೆ. ಹಣ ಮಾಡುವ ಉದ್ದೇಶದಿಂದ ಕೃತ್ಯ ಎಸಗಿರೋದಾಗಿ ಹೇಳಿದ್ದಾರೆ ಅಂತ ಮಾಹಿತಿ ಲಭ್ಯವಾಗಿದೆ. ಪರಿಚಿತರ ಮೂಲಕ ಗೋವಿಂದ ಬಾಬು ಅವರನ್ನು ಮುನ್ನಲೆಗೆ ತರುವುದು, ಟಿಕೆಟ್ ವಿಚಾರವಾಗಿ ನಂಬಿಕೆ ಬರುವಂತಹ ಸನ್ನಿವೇಶ ಸೃಷ್ಟಿಸುವುದು, ಒಂದು ವೇಳೆ ಟಿಕೆಟ್ ಸಿಕ್ಕರೆ ತಾನು ಸೇಫ್ ಅಂತಾ ಚೈತ್ರಾ ಪ್ಲ್ಯಾನ್ ಮಾಡಿದ್ದರು. ಇದಿಷ್ಟೇ ಅಲ್ಲ, ಯೋಜನೆಯಂತೆ ನಡೆಯದೇ ಟಿಕೆಟ್ ಕೈ ತಪ್ಪಿದರೆ ಏನು ಮಾಡಬೇಕು ಅನ್ನೋದಕ್ಕೂ ಚೈತ್ರಾ ಗ್ಯಾಂಗ್ ಪ್ಲ್ಯಾನ್ ಬಿ ರೆಡಿ ಮಾಡಿತ್ತು ಅನ್ನೋ ವಿಚಾರ ತಿಳಿದು ಬಂದಿದೆ.

-masthmagaa.com

Contact Us for Advertisement

Leave a Reply