ರಮೇಶ್‌ ಜಾರಕಿಹೊಳಿ ಮನೆಗೆ ಅಶ್ಲೀಲ ಪೋಸ್ಟರ್‌ ಅಂಟಿಸಿದ ಡಿಕಿಶಿ ಬೆಂಬಲಿಗರು! ಯಾಕೆ?

masthmagaa.com:

ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರ ನಡುವೆ ವಾಕ್ಸಮರ ಶುರುವಾಗಿದೆ. ನಿನ್ನೆ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ರಮೇಶ್ ಜಾರಕಿಹೊಳಿ, ಡಿಕೆಶಿ ವಿರುದ್ಧ ಬೆಂಕಿಮಳೆಯನ್ನೇ ಸುರಿಸಿದ್ದಾರೆ. ಡಿಕೆಶಿ ಪುಕ್ಕಲ, ಮೋಸಗಾರ, ಹಿಂಬಾಗಿಲ ರಾಜಕಾರಣಿ ಅಂತೆಲ್ಲಾ ಗುಡುಗಿದ್ದಾರೆ. ಹಿಂದಿನ ಮೈತ್ರಿ ಸರ್ಕಾರ ಪತನಕ್ಕೂ ಡಿಕೆ ಶಿವಕುಮಾರ್ ಕಾರಣ. ಈಗಲೂ ಈ ಸರ್ಕಾರ ಪತನಕ್ಕೆ ಡಿಕೆಶಿಯೇ ಕಾರಣವಾಗುತ್ತಾರೆ. ಬಿಜೆಪಿ ಆಪರೇಷನ್ ಕಮಲ ಮಾಡಲ್ಲ. ಮಹಾರಾಷ್ಟ್ರದ ರೀತಿ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ. ಡಿಕೆಶಿ ಮಾಜಿ ಮಂತ್ರಿಯಾಗುತ್ತಾರೆ ಅಂತ ರಮೇಶ್ ಜಾರಕಿಹೊಳಿ ಹೇಳಿಕೆ ಕೊಟ್ಟಿದ್ದಾರೆ. ಇತ್ತ ರಮೇಶ್‌ ಜಾರಕಿಹೊಳಿ ಹೇಳಿಕೆಗಳಿಂದ ಕೆರಳಿರೋ ಡಿಕೆಶಿ ಅವರ ಬೆಂಬಲಿಗರು ನಿನ್ನೆ ರಾತ್ರಿ ಸದಾಶಿವನಗರದಲ್ಲಿರುವ ರಮೇಶ್ ಜಾರಕಿಹೊಳಿ ನಿವಾಸದ ಗೋಡೆಗಳಿಗೆ ಅವಾಚ್ಯ ಬರಹಗಳಿರುವ ಪೋಸ್ಟರ್ ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿಚಾರ ಗೊತ್ತಾಗುತ್ತಿದ್ದಂತೆ ಅಲರ್ಟ್ ಆಗಿರುವ ಪೊಲೀಸರು ಕೂಡಲೇ ಪೋಸ್ಟರ್‌ಗಳನ್ನು ತೆರವುಗೊಳಿಸಿದ್ದು, ಮುಂಜಾಗ್ರತಾ ಕ್ರಮವಾಗಿ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಬಿಗಿಭದ್ರತೆ ಕಲ್ಪಿಸಲಾಗಿದೆ. ಇತ್ತ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಅವರು ರಮೇಶ್ ಜಾರಕೊಹೊಳಿ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಂದ್ಹಾಗೆ ಈ ಹಿಂದೆ ರಮೇಶ್ ಜಾರಕಿಹೊಳಿ ಮತ್ತು ಡಿ.ಕೆ.ಶಿವಕುಮಾರ್ ನಡುವೆ ನಡೆದಿದ್ದ ಸಿಡಿ ಯುದ್ಧ ರಾಜ್ಯಾದ್ಯಂತ ಸದ್ದು ಮಾಡಿತ್ತು. ಇದೀಗ ಇದೇ ಸಿಡಿ ಕೇಸ್‌ನ್ನ ಸಿಬಿಐಗೆ ವಹಿಸುವಂತೆ ಸಿಎಂ ಸಿದ್ದರಾಮಯ್ಯನವರಿಗೆ ರಮೇಶ್ ಜಾರಕಿಹೊಳಿ ಪತ್ರ ಬರೆದಿದ್ದಾರೆ.

-masthmagaa.com

Contact Us for Advertisement

Leave a Reply