masthmagaa.com:
ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದಂತೆ ಬೆಂಗಳೂರು ಶಾಸಕರು ಹಾಗೂ ಸಂಸದರ ಸಭೆ ಕರೆದಿದ್ದ ಡಿಸಿಎಂ ಡಿಕೆ ಶಿವಕುಮಾರ್, ಸರಿಯಾದ ಟೈಂಗೆ ಬಂದಿಲ್ಲ. ಹೀಗಾಗಿ ಬಿಜೆಪಿ ಶಾಸಕರು ಸಭೆಯನ್ನ ಬಹಿಷ್ಕರಿಸಿದ್ದಾರೆ. ಇದೇ ಮೊದಲ ಬಾರಿಗೆ ಈ ರೀತಿಯ ಸರ್ವ ಪಕ್ಷ ಸಭೆ ಆಯೋಜಿಸಲಾಗಿತ್ತು. ಆದ್ರೆ ಬೆಳಗ್ಗೆ 11 ಗಂಟೆಗೆ ಸಭೆ ಕರೆದು 1 ಗಂಟೆ ತಡವಾದರೂ ಆಗಮಿಸಿಲ್ಲ ಅಂತ ಬಿಜೆಪಿ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ದೇ ಸಭೆಯಿಂದ ಹೊರನಡೆದಿದ್ದಾರೆ. ಬಳಿಕ ಬಿಜೆಪಿ ಶಾಸಕರನ್ನ ಬಿಟ್ಟು ಡಿಕೆಶಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಮಳೆ ನೀರು ಸಮಸ್ಯೆ, ಬಿಬಿಎಂಪಿ ಚುನಾವಣೆ ಕುರಿತು ಚರ್ಚೆ ನಡೆಸಿದ್ದಾರೆ ಅಂತ ತಿಳಿದು ಬಂದಿದೆ.
-masthmagaa.com
Contact Us for Advertisement