ಎದ್ದು ನಿಂತು ಮಾತಾಡಿದ್ರೆ ನಿಮ್ಮನ್ನ ವಿಪಕ್ಷ ನಾಯಕ ಮಾಡಲ್ಲ: ಯತ್ನಾಳ್‌ಗೆ ಸಿದ್ದು ವ್ಯಂಗ್ಯ

masthmagaa.com:

ರಾಜ್ಯದ 16ನೇ ವಿಧಾನಸಭೆಯ ಮೊದಲ ಅಧಿವೇಶನ ನಡೆಯುತ್ತಿದ್ದು, ಇಂದು ಮೂರನೇ ದಿನದ ಕಲಾಪ ಅಂತ್ಯಗೊಂಡಿದೆ. ಗ್ಯಾರಂಟಿ ಯೋಜನೆಗಳ ಜಾರಿಗೆ ಆಗ್ರಹಿಸಿ ನಿನ್ನೆ ಬಿಜೆಪಿ ಸದಸ್ಯರು ಸದನ ಬಾವಿಗೆ ಇಳಿದು ಆಕ್ರೋಶ ವ್ಯಕ್ತಪಡಿಸಿದ್ರು. ಇಂದು ಗ್ಯಾರಂಟಿಗಳ ಕುರಿತು ಚರ್ಚೆಗೆ ಅವಕಾಶ ನೀಡುವುದಾಗಿ ಸ್ಪೀಕರ್ ಭರವಸೆ ನೀಡಿದ ಹಿನ್ನೆಲೆ ವಿಧಾನಸಭೆ ಕಲಾಪದಲ್ಲಿ ಬಿಜೆಪಿ ಶಾಸಕರು ಧರಣಿ ವಾಪಸ್ ಪಡೆದಿದ್ದಾರೆ. ನಿಲುವಳಿ ಪ್ರಸ್ತಾವ ಮಂಡನೆ ವೇಳೆ ಸರ್ಕಾರದ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ಮಾಡಿದ್ದಾರೆ. ಈ ವೇಳೆ ಮಧ್ಯ ಪ್ರವೇಶಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಯತ್ನಾಳ್ ಅವರೇ ನೀವು ಸ್ವಲ್ಪ ತಾಳ್ಮೆಯಿಂದಿರಿ. ನಿಮ್ಮನ್ನ ವಿಪಕ್ಷ‌ ನಾಯಕ ಮಾಡ್ತಾರೋ ಇಲ್ವೋ ಗೊತ್ತಿಲ್ಲ. ಇಲ್ಲಿ ಎದ್ದೆದ್ದು ನಿಂತು ಮಾತಾಡಿದ್ರೆ ನಿಮ್ಮನ್ನ ವಿಪಕ್ಷ ನಾಯಕ ಮಾಡುತ್ತಾರೆ ಅಂತಾ ಅಂದುಕೊಂಡಿದ್ದೀರಾ? ಸದನ ಆರಂಭವಾಗಿ ಮೂರು ದಿನ ಆದರೂ ವಿಪಕ್ಷ ನಾಯಕ ಮಾಡಲು ಆಗಿಲ್ಲ. ಇಲ್ಲಿ ಬಂದು ಬುರುಡೆ ಹೊಡೆಯುತ್ತಿದ್ದೀರಿ ಅಂತ​​​ ಯತ್ನಾಳ್ ಅವರಿ​​ಗೆ ಕಿಚಾಯಿಸಿದ್ದಾರೆ. ಇನ್ನು ಕಲಾಪವನ್ನ ಸ್ಪೀಕರ್‌ ಮುಂದೂಡಡಿದ ಬಳಿ, ಸದನದೊಳಗೆ ಕೆಲವು ಹೊತ್ತು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮತ್ತು ಯತ್ನಾಳ್ ಮಾತುಕತೆ ನಡೆಸಿದ್ದಾರೆ. ಹತ್ತು ನಿಮಿಷಗಳಿಗೂ ಹೆಚ್ಚು ಕಾಲ ಮಾತನಾಡಿ ಜೊತೆಯಾಗಿಯೇ ಸದನದಿಂದ ಹೊರಬಂದಿದ್ದು ಎಲ್ಲರ ಗಮನ ಸೆಳೆದಿದೆ.

 

-masthmagaa.com

Contact Us for Advertisement

Leave a Reply