ಮಾಜಿ ಸಿಎಂ ಎಚ್‌ಡಿಕೆ ಭೇಟಿಯಾದ ಮಾಜಿ ಸಚಿವ ಡಾ.ಸುಧಾಕರ್!

masthmagaa.com:

ಮಾಜಿ ಸಚಿವ ಡಾ. ಕೆ ಸುಧಾಕರ್‌ ಎಚ್‌ಡಿ ಕುಮಾರಸ್ವಾಮಿ ಅವ್ರನ್ನ ಭೇಟಿಯಾಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸುಧಾಕರ್‌ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಪರ್ಧಿಸ್ತಾರೆ ಎನ್ನಲಾಗ್ತಿದೆ. ಹೀಗಾಗಿ ಈ ಭೇಟಿ ರಾಜಕೀಯ ವಲಯದಲಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಅತ್ತ ಹಾನಗಲ್‌ ಸಾಮೂಹಿಕ ಅತ್ಯಾಚಾರ ಕೇಸ್‌ ಬಗ್ಗೆ ಸಿಎಂ ಸಿದ್ಧರಾಮಯ್ಯ ಮಾತನಾಡಿದ್ದಾರೆ. ತಪ್ಪಿತಸ್ಥರಿಗೆ ಕ್ಷಮೆ ಇಲ್ಲ. ಯಾರನ್ನೂ ರಕ್ಷಣೆ ಮಾಡೋ ಪ್ರಶ್ನೇನೆ ಇಲ್ಲ ಅಂತ ಸಿಎಂ ಹೇಳಿದ್ದಾರೆ. ಇನ್ನು ಅತ್ತ ಮಸೀದಿ ವಿಚಾರವಾಗಿ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದ ಸಂಸದ ಅನಂತ್‌ಕುಮಾರ್‌ ಹೆಗಡೆ ಬಗ್ಗೆ ಬಿಜೆಪಿ ರಾಜ್ಯಧ್ಯಕ್ಷ ವಿಜಯೇಂದ್ರ ಮಾತನಾಡಿದ್ದಾರೆ. ಅನಂತ್‌ಕುಮಾರ್‌ ಹೇಳಿಕೆಗೂ ಪಕ್ಷಕ್ಕೂ ಸಂಬಂಧ ಇಲ್ಲ. ಇದು ಅವ್ರ ವೈಯಕ್ತಿಕ ಹೇಳಿಕೆ ಅಂತ ಅಂತರ ಕಾಯ್ಕೊಂಡಿದ್ದಾರೆ.

-masthmagaa.com

Contact Us for Advertisement

Leave a Reply