masthmagaa.com:
ನದಿಗೆ APSRTC ಬಸ್ ಉರುಳಿದ ಪರಿಣಾಮ 9 ಜನ ಮೃತಪಟ್ಟಿರೋ ಘಟನೆ ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಜಂಗಾರೆಡ್ಡಿಗುದೆಂ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ 22 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ನಲ್ಲಿ ಡ್ರೈವರ್, ಕಂಡಕ್ಟರ್ ಸೇರಿ ಒಟ್ಟು 47 ಜನರಿದ್ರು. ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
-masthmagaa.com
2021-12-15