ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಚುನಾವಣಾ ಕಾವು !

masthmagaa.com:

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಶುರುವಾಗಿದೆ. ಹಲವು ಪ್ರಮುಖರು ವಿವಿಧ ಹುದ್ದೆಗಳಿಗಾಗಿ ಚುನಾವಣೆ ಎದುರಿಸಲು ನಾಮಪತ್ರ ಸಲ್ಲಿಸಿದ್ದಾರೆ.

ಸೆಪ್ಟೆಂಬರ್ 23ರಂದು ಚಲನಚಿತ್ರ ವಾಣಿಜ್ಯ ಮಂಡಳಿಗೆ ಚುನಾವಣೆ ನಡೆಯಲಿದೆ. ವಾಣಿಜ್ಯ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಶುರುವಾಗಿದೆ. ಬೆಳಿಗ್ಗೆ ಫಿಲಂ ಚೇಂಬರ್‌ಗೆ ಆಗಮಿಸಿದ ಎನ್ ಎಮ್ ಸುರೇಶ್, ಡಾ. ರಾಜ್ ಕುಮಾರ್ ಪ್ರತಿಮೆಗೆ ಹಾರ ಹಾಕಿ ನಮಸ್ಕಾರ ಮಾಡಿ, ನಂತರ ನಾಮಪತ್ರ ಸಲ್ಲಿಸಿದ್ರು. ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಎನ್ ಎಮ್ ಸುರೇಶ್, ”ಸಾರಾ ಗೋವಿಂದ್ ನನ್ನ ಮೇಲಿನ ಪ್ರೀತಿಗಾಗಿ ಬಂದಿದ್ದಾರೆ. ನನಗೆ ಇವತ್ತು ಈ ಭಾಗ್ಯ ಸಿಕ್ಕಿರೋದು ನನ್ನ ಪುಣ್ಯ. ಒಳ್ಳೆಯ ಅಭ್ಯರ್ಥಿಗಳನ್ನು ಗೆಲ್ಲಿಸಿ. ಈಗಲೇ ಅದು ಮಾಡ್ತೀನಿ ಇದು ಮಾಡ್ತಿನಿ ಅಂತ ಹೇಳಲ್ಲ. ಆದರೆ ದೊಡ್ಡ ಸಮಸ್ಯೆಗಳಿವೆ ಅವುಗಳನ್ನು ಸರಿಪಡಿಸುವ ಕೆಲಸ ಖಂಡಿತ ಮಾಡ್ತೀನಿ. ಅವಕಾಶ ಕೊಡಿ” ಅಂತ ಹೇಳಿದ್ದಾರೆ.

ಇನ್ನು ಸಾರಾ ಗೋವಿಂದ್ ಅವರು ಮಾತನಾಡಿ, ‘ಬಹಳ ದಿನ ಆದ ಬಳಿಕ ಎಲ್ಲರನ್ನೂ ಭೇಟಿ ಆಗ್ತಾ ಇದೀನಿ. ಈ ಬಾರಿಯ ಚುನಾವಣೆ ಪ್ರಾಮುಖ್ಯತೆ ಪಡೆದು ಕೊಂಡಿದೆ. ಬಹಳ ಪೈಪೋಟಿಯಲ್ಲಿ ಚುನಾವಣೆ ನಡೆಯುತ್ತಿರೋದನ್ನ ನೋಡಲು ಖುಷಿ ಆಗ್ತಾ ಇದೆ. ಎನ್ ಎಮ್ ಕುಮಾರ್ ಎಲ್ಲರ ಪ್ರೀತಿ, ಬೆಂಬಲದಿಂದ ನಾಮಪತ್ರ ಸಲ್ಲಿಸಿದ್ದಾರೆ. ಎನ್ ಎಮ್ ಸುರೇಶ್ ಅವರಿಗೆ ಬೆಂಬಲ ನೀಡ್ತೀನಿ. ಅಭ್ಯರ್ಥಿಗಳ ಯೋಗ್ಯತೆ ನೋಡಿಕೊಂಡು ಗೆಲ್ಲಿಸಿ’ ಅಂತ ಹೇಳಿದ್ರು.

-masthmagaa.com

 

Contact Us for Advertisement

Leave a Reply