masthmagaa.com:
ಮುಚ್ಚಿದ ಲಕೋಟೆಗಳನ್ನು ನ್ಯಾಯಾಲಯಗಳಿಗೆ ಸಲ್ಲಿಸುವ ಅಭ್ಯಾಸವನ್ನ CJI ಟೀಕಿಸಿದ್ದಾರೆ.ಒಂದು ಶ್ರೇಣಿ ಒಂದು ಪಿಂಚಣಿಯ ಬಾಕಿ ಮೊತ್ತದ ಪಾವತಿಸುವ ವಿಚಾರಕ್ಕೆ ಸಂಬಂಧಿಸಿದ ಪ್ರಕರಣ ವಿಚಾರಣೆ ವೇಳೆ, ಕೇಂದ್ರ ಸರ್ಕಾರ ಮುಚ್ಚಿದ ಲಕೋಟೆಯಲ್ಲಿ ನೀಡಿದ ಪತ್ರವನ್ನ ಸ್ವೀಕರಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಮುಚ್ಚಿದ ಲಕೋಟೆಯಲ್ಲಿ ನೀಡುವ ಅಭ್ಯಾಸ ನ್ಯಾಯೋಚಿತ ಪ್ರಕ್ರಿಯೆಗೆ ವಿರುದ್ಧವಾಗಿದೆ, ವೈಯಕ್ತಿಕವಾಗಿ ನನಗೆ ಮುಚ್ಚಿದ ಲಕೋಟೆಗಳು ಹಿಡಿಸುವುದಿಲ್ಲ. ಕೋರ್ಟ್ಗಳಲ್ಲಿ ಪಾರದರ್ಶಕತೆ ಇರಬೇಕು ಅಂತ ಸಿಜೆಐ ಡಿ.ವೈ ಚಂದ್ರಚೂಡ್ ಅವ್ರು ಹೇಳಿದ್ದಾರೆ.
-masthmagaa.com
Contact Us for Advertisement