ಡ್ರಗ್ಸ್​ ಕೇಸ್​ನಲ್ಲಿ ರುದ್ರಪ್ಪ ಲಮಾಣಿ ಪುತ್ರ ಅರೆಸ್ಟ್: ಮಾಜಿ ಸಚಿವರು ಹೇಳಿದ್ದೇನು?

masthmagaa.com:

ಡ್ರಗ್ಸ್ ಪ್ರಕರಣ ಸಂಬಂಧ ಮಾಜಿ ಸಚಿವ ಮತ್ತು ಹಾವೇರಿ ಕಾಂಗ್ರೆಸ್ ನಾಯಕ ರುದ್ರಪ್ಪ ಲಮಾಣಿ ಅವರ ಪುತ್ರ ದರ್ಶನ್ ಲಮಾಣಿ​ ಸೇರಿ ಮೂವರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ‌. ಡಾರ್ಕ್ ನೆಟ್ ಮೂಲಕ ಡ್ರಗ್ಸ್ ಖರೀದಿಸಿ ಮಾರಾಟ ಮಾಡುತ್ತಿದ್ದ ಆರೋಪದಡಿ ಇತ್ತೀಚೆಗಷ್ಟೇ ಸುಜಯ್ ಎಂಬಾತನನ್ನ ಪೊಲೀಸರು ಬಂಧಿಸಿದ್ದರು. ಆತನಿಂದ ಅರ್ಧ ಕೆಜಿಯಷ್ಟು ಹೈಡ್ರೊ ಗಾಂಜಾ ಜಪ್ತಿ ಮಾಡಿದ್ದರು. ಈ ಡ್ರಗ್ಸ್ ಜಾಲದಲ್ಲಿದ್ದ ಹೇಮಂತ್ ಮತ್ತು ಸುನೇಶ್ ಎಂಬುವರು ತಲೆಮರೆಸಿಕೊಂಡಿದ್ದರು. ಅವರಿಬ್ಬರ ಬಂಧನಕ್ಕಾಗಿ ಸಿಸಿಬಿ ತಂಡ ಗೋವಾಕ್ಕೆ ತೆರಳಿತ್ತು‌. ಅಲ್ಲಿಯೇ ಅವರಿಬ್ಬರನ್ನು ಬಂಧಿಸಲಾಗಿದೆ‌. ಡ್ರಗ್ಸ್ ಪ್ರಕರಣದ ಆರೋಪಿಗಳಿಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಿ, ಸಹಕಾರ ನೀಡಿದ್ದ ಆರೋಪದಡಿ ದರ್ಶನ್ ಲಮಾಣಿಯನ್ನು ಕೂಡ ಪೊಲೀಸರು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ. ದರ್ಶನ್ ಲಮಾಣಿ ತಂದೆ ರುದ್ರಪ್ಪ ಲಮಾಣಿ ಸಿದ್ದರಾಮಯ್ಯ ಸರ್ಕಾರದಲ್ಲಿ ಜವಳಿ ಸಚಿವರಾಗಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರೋ ರುದ್ರಪ್ಪ ಲಮಾಣಿ, ‘ನನ್ನ ಪುತ್ರ ಅರೆಸ್ಟ್ ಆಗಿರುವ ಬಗ್ಗೆ ನನಗೇನೂ ಗೊತ್ತಿಲ್ಲ. ಬೆಂಗಳೂರಿಗೆ ಹೋಗ್ತೀನಿ ಅಂತ ಬಂದಿದ್ದ. ಬಳಿಕ ಫ್ರೆಂಡ್ಸ್ ಜೊತೆ ಗೋವಾಕ್ಕೆ ಹೋಗಿದ್ದಾನೆ ಅನ್ನೋದು ಗೊತ್ತಾಗಿದೆ. ನಿನ್ನೆ ಅವನ ಫೋನ್ ಸ್ವಿಚ್​ ಆಫ್ ಆಗಿತ್ತು. ಪುತ್ರನ ಬಂಧನ ವಿಚಾರ ಕೇಳಿ ಆಶ್ಚರ್ಯವಾಗಿದೆ’ ಅಂತ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply