masthmagaa.com:
ಐಪಿಎಲ್ನಲ್ಲಿ ಆರ್ಸಿಬಿ ತಂಡದ ಅಭಿಮಾನಿಯೊಬ್ಬ ಕಾಂತಾರ ಚಿತ್ರದಲ್ಲಿ ರಿಷಭ್ ಶೆಟ್ಟಿಯ ದೈವನರ್ತಕನ ಪಾತ್ರದ ರೀತಿ ವಸ್ತ್ರ ಧರಿಸಿ ಬಂದಿದ್ದ. ಇದನ್ನು ಸ್ವತಃ ಆರ್ಸಿಬಿ ಟೀಮ್ ಕೂಡ ತನ್ನ ಟ್ವಿಟರ್ ಹ್ಯಾಂಡಲ್ನಲ್ಲಿ ಪ್ರಕಟ ಮಾಡಿತ್ತು. ಇದನ್ನು ಟ್ವಿಟರ್ನಲ್ಲಿ ಹಂಚಿಕೊಂಡಿರುವ ದುರ್ಗಾದಾಸ್ ರಾಮದಾಸ್ ಕಟೀಲ್ ಎನ್ನುವವರು, ಬೆಂಗಳೂರಿನಲ್ಲಿ ನಿನ್ನೆ ಆರ್ಸಿಬಿ ಮತ್ತು ಮುಂಬೈ ನಡುವಿನ ಪಂದ್ಯದಲ್ಲಿ ಇದನ್ನು ನೋಡಿ ತುಂಬಾ ಬೇಸರವಾಯಿತು. ಕರಾವಳಿ ಕರ್ನಾಟಕದಲ್ಲಿ ದೈವಾರಾಧನೆ ಒಂದು ಆಚರಣೆಯಾಗಿದ್ದು, ಮುಂದಿನ ಪಂದ್ಯಗಳಲ್ಲಿ ದೈವಾರಾಧನೆಯನ್ನು ಬಳಸದಂತೆ ಅಭಿಮಾನಿಗಳಲ್ಲಿ ವಿನಂತಿಸಲಾಗಿದೆ. ನಾವು ತುಳುವರು ಈ ಸಂಪ್ರದಾಯವನ್ನು ಗೌರವದಿಂದ ಪರಿಗಣಿಸುತ್ತೇವೆ’ ಎಂದು ದುರ್ಗಾದಾಸ್ ಕಟೀಲ್ ಬರೆದುಕೊಂಡಿದ್ದಾರೆ. ‘ಭೂತಕೋಲಕ್ಕೆ ಸಂಬಂಧಿಸಿದ ಅಂಶಗಳನ್ನು ಮನರಂಜನೆಗಾಗಿ ಬಳಸಬೇಡಿ ಎಂದು ಬಲವಾಗಿ ಜನರನ್ನು ಒತ್ತಾಯಿಸಿ, ಇದು ಕಾಂತಾರರಿಂದ ಪ್ರಾರಂಭವಾಗಿದೆ. ಇದನ್ನು ಜನರಿಗೆ ನೀವೇ ಹೇಳಬೇಕು’ ಎಂದು ರಿಷಭ್ ಶೆಟ್ಟಿ ಹಾಗೂ ಹೊಂಬಾಳೆ ಫಿಲಂ ಅವರನ್ನು ಟ್ಯಾಗ್ ಮಾಡಿ ಇನ್ನೊಬ್ಬರು ಕಾಮೆಂಟ್ ಮಾಡಿದ್ದಾರೆ.
-masthmagaa.com
Contact Us for Advertisement