masthmagaa.com:
ರಾಜ್ಯದ 223 ತಾಲ್ಲೂಕುಗಳಲ್ಲಿ ಬರಗಾಲ ಆವರಿಸಿರೋ ಹಿನ್ನಲೆ ರಾಜ್ಯ ಸರ್ಕಾರ ರೈತರಿಗೆ ತಲಾ 2 ಸಾವಿರ ರೂ. ಬೆಳೆ ಪರಿಹಾರ ನೀಡಲು ನಿರ್ಧರಿಸಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಈ ಬಾರಿ ಮಳೆ ಅಭಾವದಿಂದಾಗಿ ರಾಜ್ಯದ 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಕೇಂದ್ರಕ್ಕೆ ಸಿಎಂ ಎರಡು ಬಾರಿ ಪತ್ರ ಬರೆದ್ರೂ ಏನು ಉಪಯೋಗವಾಗಿಲ್ಲ ಅಂತ ಕೇಂದ್ರ ಸರ್ಕಾರದ ವಿರುದ್ದ ಅಸಮಾಧಾನ ಹೊರ ಹಾಕಿದ್ದಾರೆ. ಅಲ್ಲದೆ ʻಬೆಳೆ ಪರಿಹಾರ ಹಣವನ್ನು ಡಿಬಿಟಿ ಮೂಲಕ ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗುವುದು. ಇದಕ್ಕಾಗಿ ರೈತ ನೋಂದಣಿ ಮತ್ತು ಫಲಾನುಭವಿ ಮಾಹಿತಿ ವ್ಯವಸ್ಥೆ (FRUITS) ಪೋರ್ಟಲ್ನಲ್ಲಿ ಆನ್ ಲೈನ್ ಮೂಲಕ ನೋಂದಾಯಿಸಿಕೊಳ್ಳಬೇಕು.ʼ ಅಂತ ಸಚಿವರು ಹೇಳಿದ್ದಾರೆ.
-masthmagaa.com
Contact Us for Advertisement