masthmagaa.com:
ಬೆಳಗಾವಿಯಲ್ಲಿ ಇವತ್ತು ಬೈಪಾಸ್ ರಸ್ತೆ ಕಾಮಗಾರಿ ವೇಳೆ ಭಾರಿ ಹೈಡ್ರಾಮಾ ನಡೆದಿದೆ. ಸರ್ಕಾರ ಮತ್ತು ಅಧಿಕಾರಿಗಳು ರೈತರಿಗೆ ಮೋಸ ಮಾಡಿ ಫಲವತ್ತಾದ ಭೂಮಿಯನ್ನ ಕಾಮಗಾರಿಗೆ ಸ್ವಾಧೀನ ಮಾಡಿಕೊಂಡಿದ್ದಾರೆ. ಹೀಗಾಗಿ ತಾವು ಪ್ರಾಣ ಹೋದ್ರೂ ರಸ್ತೆ ಕಾಮಗಾರಿಗೆ ಅವಕಾಶ ಕೊಡಲ್ಲ ಅಂತ ರೈತರು ಪಟ್ಟು ಹಿಡಿದಿದ್ದರು. ಈ ವೇಳೆ ಪೊಲೀಸರು ಮತ್ತು ರೈತರ ನಡುವೆ ವಾಕ್ಸಮರ, ನೂಕಾಟ, ತಳ್ಳಾಟ ಎಲ್ಲಾ ನಡೆದಿದೆ. ಇನ್ನು ಪೊಲೀಸರು ಮಹಿಳೆಯರನ್ನ ಎಳೆದಾಡಿ ಸೀರೆ ಹರಿದು ಹಾಕಿದ್ದಾರೆ ಅಂತ ರೈತ ಮಹಿಳೆಯರು ಆರೋಪಿಸಿದ್ದಾರೆ. ಇದೇ ವೇಳೆ ಓರ್ವ ರೈತ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆಯೂ ನಡೀತು. ಮತ್ತೋರ್ವ ಕುಡುಗೋಲಿನಿಂದ ಆತ್ಮಹತ್ಯೆಗೆ ಯತ್ನಿಸಿದ್ದ. ಸದ್ಯ ಜಿಲ್ಲಾಧಿಕಾರಿಗಳು ನೀಡಿದ ಸೂಚನೆ ಹಿನ್ನೆಲೆ ರಸ್ತೆ ಕಾಮಗಾರಿಯನ್ನ ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ ಅಂತ ಗೊತ್ತಾಗಿದೆ.
-masthmagaa.com
Contact Us for Advertisement