“ಚಂದನವನ ಕ್ರಿಟಿಕ್ಸ್ ಅವಾರ್ಡ್‌” ಪ್ರಶಸ್ತಿ ಪ್ರಕಟ: ಕೆಜಿಎಫ್-2‌ ಮತ್ತು ಕಾಂತಾರದ್ದೇ ಮೇಲುಗೈ!

masthmagaa.com:

ಸ್ಯಾಂಡಲ್‌ವುಡ್‌ನ 4ನೇ ಫಿಲ್ಮ್‌ ಕ್ರಿಟಿಕ್‌ ಅಕಾಡೆಮಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ನಲ್ಲಿ ನಡೆಯಿತು. 2022ರಲ್ಲಿ ಬಿಡುಗಡೆಯಾದ ಸಿನಿಮಾಗಳಿಗೆ ನೀಡಿದ ಪ್ರಶಸ್ತಿಗಳು ಆಲ್‌ಮೋಸ್ಟ್‌ “ಕಾಂತಾರ” ಮತ್ತು “ಕೆಜಿಎಫ್‌-2” ಚಿತ್ರಗಳಿಗೆ ಸಿಕ್ಕಿದೆ. ಈ ಕಾರ್ಯಕ್ರಮದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಮೋಹಕ ತಾರೆ ರಮ್ಯಾ, ಫಿಲ್ಮ್ ಚೇಂಬರ್ ಅಧ್ಯಕ್ಷ ಭಾ.ಮಾ.ಹರೀಶ್, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಬಿ.ಎಸ್.ಲಿಂಗದೇವರು, ನಿರ್ದೇಶಕರಾದ ಬಿ.ಸುರೇಶ್, ರಾಜೇಂದ್ರ ಸಿಂಗ್ ಬಾಬು, ನಾಗತಿಹಳ್ಳಿ ಚಂದ್ರಶೇಖರ್, ಸ್ಮೈಲ್ ಶ್ರೀನು,ನಟಿ ಕಾರುಣ್ಯ ರಾಮ್, ಮುಂತಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಪ್ರಶಸ್ತಿಗಳ ಪಟ್ಟಿ ಈ ರೀತಿಯಾಗಿದೆ

ಅತ್ಯುತ್ತಮ ಚಿತ್ರ
ಕಾಂತಾರ

ಅತ್ಯುತ್ತಮ ನಿರ್ದೇಶಕ
ಕಿರಣ್ ರಾಜ್ (ಚಾರ್ಲಿ)

ಅತ್ಯುತ್ತಮ ನಾಯಕ
ರಿಷಬ್ ಶೆಟ್ಟಿ (ಕಾಂತಾರ)

ಅತ್ಯುತ್ತಮ ನಾಯಕಿ
ಶರ್ಮಿಳಾ ಮಾಂಡ್ರೆ (ಗಾಳಿಪಟ 2)

ಅತ್ಯುತ್ತಮ ಸಂಭಾಷಣೆ
ಮಾಸ್ತಿ (ಗುರು ಶಿಷ್ಯರು)

ಅತ್ಯುತ್ತಮ ಪೋಷಕ ನಟ
ಸುಚೇಂದ್ರ ಪ್ರಸಾದ್ (ವ್ಹೀಲ್ ಚೇರ್ ರೋಮಿಯೋ)

ಅತ್ಯುತ್ತಮ ಪೋಷಕ ನಟಿ
ಸುಧಾರಾಣಿ (ತುರ್ತು ನಿರ್ಗಮನ)

ಅತ್ಯುತ್ತಮ ಚಿತ್ರಕಥೆ
ಡಾರ್ಲಿಂಗ್ ಕೃಷ್ಣ (ಲವ್ ಮಾಕ್ಟೆಲ್ 2)

ಅತ್ಯುತ್ತಮ ಬಾಲನಟ/ನಟಿ
ಶಾರ್ವರಿ (ಚಾರ್ಲಿ)

ಅತ್ಯುತ್ತಮ ಸಂಗೀತ
ಕಾಂತಾರ (ಅಜನೀಶ್)

ಅತ್ಯುತ್ತಮ ಹಿನ್ನೆಲೆ ಸಂಗೀತ
ಅನೂಪ ಸೀಳೀನ್ (ಮಾನ್ಸೂನ್ ರಾಗ)

ಅತ್ಯುತ್ತಮ ಚಿತ್ರ ಸಾಹಿತ್ಯ
ಶಶಾಂಕ (ಲವ್ 350)

ಅತ್ಯುತ್ತಮ ಗಾಯಕ
ಮೋಹನ್ (ಜುಂಜಪ್ಪ, ವೇದ)

ಅತ್ಯುತ್ತಮ ಗಾಯಕಿ
ಐಶ್ವರ್ಯ ರಂಗರಾಜ್‌ನ್‌ (ಏಕ್ ಲವ್ ಯಾ)

ಅತ್ಯುತ್ತಮ ಛಾಯಾಗ್ರಹಣ
ಭುವನ್ ಗೌಡ (ಕೆಜಿಎಫ್ 2)

ಅತ್ಯುತ್ತಮ ಸಂಕಲನ
ಉಜ್ವಲ್ ಕುಲಕರ್ಣಿ (ಕೆಜಿಎಫ್2)

ಅತ್ಯುತ್ತಮ ಕಲಾ ನಿರ್ದೇಶನ
ಶಿವಕುಮಾರ (ವಿಕ್ರಾಂತ ರೋಣ)

ಅತ್ಯುತ್ತಮ ನೃತ್ಯ ನಿರ್ದೇಶನ
ಮೋಹನ್ (ಏಕ್ ಲವ್ ಯಾ, ಮೀಟ್ ಮಾಡೋಣ)

ಅತ್ಯುತ್ತಮ ಸಾಹಸ
ವಿಕ್ರಮ್ ಮೋರ್ (ಕಾಂತಾರ)

ಅತ್ಯುತ್ತಮ ವಿಎಫ್ ಎಕ್ಸ್
ಉದಯ ರವಿ ಹೆಗಡೆ ಯೂನಿಫೈ ಮೀಡಿಯಾ (ಕೆಜಿಎಫ್2)

ಅತ್ಯುತ್ತಮ ನಟ (ಡೆಬ್ಯು)
ಪೃಥ್ವಿ ಶ್ಯಾಮನೂರು (ಪದವಿ ಪೂರ್ವ)

ಅತ್ಯುತ್ತಮ ನಟಿ (ಡೆಬ್ಯು)
ಯಶಾ ಶಿವಕುಮಾರ್ (ಮಾನ್ಸೂನ್‌ ರಾಗ)

ಅತ್ಯುತ್ತಮ ನಿರ್ದೇಶಕ (ಡೆಬ್ಯು)
ಶ್ರೀಧರ್ ಶಿಕಾರಿಪುರ (ಧರಣಿ ಮಂಡಲ ಮಧ್ಯದೊಳಗೆ)

ಅತ್ಯುತ್ತಮ ನಿರ್ಮಾಪಕ (ಡೆಬ್ಯು)
ಪವನ್ ಒಡೆಯರ್ (ಡೊಳ್ಳು)

ಅತ್ಯುತ್ತಮ ಬರಹಗಾರ (ಡೆಬ್ಯು)
ಶ್ರೀಧರ್ ಶಿಕಾರಿಪುರ (ಧರಣಿ ಮಂಡಲ ಮಧ್ಯದೊಳಗೆ)

ಅತ್ಯುತ್ತಮ ಯುಟ್ಯೂಬರ್
ಕಲಾ ಮಾಧ್ಯಮ (ಪರಮೇಶ್ವರ ಕೆ.ಎಸ್)

ಅತ್ಯುತ್ತಮ ಮನರಂಜನಾ ಸಾಮಾಜಿಕ ಜಾಲತಾಣ
ವಿಕ್ಕಿ ಪೀಡಿಯಾ

ಇನ್ನು ಕಾಂತಾರ ಸಿನಿಮಾಗೆ 4 ಪ್ರಶಸ್ತಿ,ಕೆಜಿಎಫ್-2 ಚಿತ್ರಕ್ಕೆ 3 ಪ್ರಶಸ್ತಿಗಳು ಸಿಕ್ಕಿದೆ.ಈ ಸಲ ಒಟ್ಟು 5 ಪ್ರಶಸ್ತಿಗಳನ್ನ ವಿಶೇಷವಾಗಿ ಘೋಷಣೆ ಮಾಡಲಾಯಿತು. ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಅತ್ಯುತ್ತಮ ನಿರ್ಮಾಪಕ (ಡೆಬ್ಯು), ಶಂಕರನಾಗ್ ಹೆಸರಿನಲ್ಲಿ ಅತ್ಯುತ್ತಮ ನಿರ್ದೇಶಕ (ಡೆಬ್ಯು) ತ್ರಿಪುರಾಂಭ ಹೆಸರಿನಲ್ಲಿ ಅತ್ಯುತ್ತಮ ನಟಿ (ಡೆಬ್ಯು),ಸಂಚಾರಿ ವಿಜಯ್ ಹೆಸರಿನಲ್ಲಿ ಅತ್ಯುತ್ತಮ ನಟ (ಡೆಬ್ಯು),ಹಾಗೂ ಚಿ.ಉದಯ ಶಂಕರ್ ಹೆಸರಿನಲ್ಲಿ ಅತ್ಯುತ್ತಮ ಬರಹಗಾರ (ಡೆಬ್ಯು) ಪ್ರಶಸ್ತಿಯನ್ನು ನೀಡಲಾಯಿತು.

-masthmagaa.com

Contact Us for Advertisement

Leave a Reply