ಗುತ್ತಿಗೆದಾರರ ಮೇಲೆ ಹಲ್ಲೆ: ಗುಬ್ಬಿ ಕೈ ಶಾಸಕರ ವಿರುದ್ದ FIR!

masthmagaa.com:

ಗುತ್ತಿಗೆದಾರರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುಬ್ಬಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ SR ಶ್ರೀನಿವಾಸ್‌ ಮೇಲೆ FIR ದಾಖಲಾಗಿದೆ. ಗುಬ್ಬಿ ಪಟ್ಟಣದ ಲೋಕೋಪಯೋಗಿ ಇಲಾಖೆಯ ಆವರಣದಲ್ಲಿ ಟೆಂಡರ್‌ ರದ್ದು ಮಾಡಿದ್ದಕ್ಕೆ ಪ್ರತಿಭಟನೆ ಮಾಡಲಾಗಿತ್ತು. ಈ ವೇಳೆ ಗುತ್ತಿಗೆದಾರ ರವಿಕುಮಾರ್‌ ಅನ್ನೋರ ಮೇಲೆ ಶಾಸಕರು ಹಲ್ಲೆ ನಡೆಸಿದ್ದಾರೆ ಅನ್ನೋ ಆರೋಪ ಕೇಳಿ ಬಂದಿದೆ. ಇದರ ಬೆನ್ನಲ್ಲೇ ದೂರು ದಾಖಲಾಗಿದೆ. ಇನ್ನು ಗಾಯಗೊಂಡ ಗುತ್ತಿಗೆದಾರರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡಿತಿದ್ದಾರೆ ಅಂತ ಮಾಹಿತಿ ಲಭ್ಯವಾಗಿದೆ. ಇನ್ನೊಂದೆಡೆ ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿರೊ ಸಂಸದೆ ಸುಮಲತಾ ಅಂಬರೀಷ್‌ ಅವ್ರನ್ನ ಬಿಜೆಪಿ ಹೈಕಮಾಂಡ್‌ ದೆಹಲಿಗೆ ಬರುವಂತೆ ಕರೆ ನೀಡಿದೆ. ಮಂಡ್ಯದಲ್ಲಿ ಈ ಬಾರಿ ಜೆಡಿಎಸ್‌ನಿಂದ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆ ಮಾಡ್ತಾರೆ ಅನ್ನೊ ವಾತಾವರಣ ಸೃಷ್ಠಿಯಾದ ಹೊತ್ತಲ್ಲೆ ಈ ಬೆಳವಣಿಗೆ ನಡೆದಿದ್ದು, ತೀವ್ರ ಕುತೂಹಲ ಮೂಡಿಸಿದೆ.

-masthmagaa.com

Contact Us for Advertisement

Leave a Reply