masthmagaa.com:
ಉರಿಗೌಡರು ನಂಜೇಗೌಡರು ಟಿಪ್ಪುವನ್ನು ಕೊಂದಂತೆ ಸಿದ್ದರಾಮಯ್ಯ ಅವ್ರನ್ನ ಹೊಡೆದು ಹಾಕಬೇಕು ಅಂತ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಅಶ್ವತ್ಥ ನಾರಾಯಣ ಹೇಳಿಕೆ ನೀಡಿದ್ರು. ಇದೀಗ ಈ ಸಂಬಂಧ ಮೈಸೂರಿನಲ್ಲಿ FIR ದಾಖಲಾಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರೊ ಅಶ್ವತ್ಥ ನಾರಾಯಣ, ಈ ವಿಚಾರದಲ್ಲಿ ಸಿದ್ದರಾಮಯ್ಯ ಅವರಿಗೆ ಇದ್ದ ಟಿಪ್ಪು ಪ್ರೇಮವನ್ನು ಖಂಡಿಸಿದ್ದೇನೆ. ಕಾಂಗ್ರೆಸ್ ಪಕ್ಷವನ್ನ ಚುನಾವಣೆಯಲ್ಲಿ ಸೋಲಿಸಬೇಕು ಅನ್ನೊ ಅರ್ಥದಲ್ಲಿ ಹೇಳಿದ್ದೆ. ವೈಯಕ್ತಿಕವಾಗಿ ನನಗೆ ಸಿದ್ದರಾಮಯ್ಯ ಮೇಲೆ ಗೌರವ ಇದೆ. ಅಲ್ದೇ ಸದನದಲ್ಲಿ ವಿಷಾದವನ್ನೂ ವ್ಯಕ್ತಪಡಿಸಿದ್ದೇನೆ. ಆ ಪ್ರಕರಣ ಅಲ್ಲಿಗೆ ಕೊನೆಗೊಳ್ಳಬೇಕಿತ್ತು, ಆದರೆ ಹಾಗಾಗುತ್ತಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದಕೂಡಲೇ ದ್ವೇಷದ ರಾಜಕಾರಣಕ್ಕೆ ಅಡಿಯಿರಿಸಿದೆ. ಪೊಲೀಸರ ಮೇಲೆ ಒತ್ತಡ ಹೇರಿ ತಮ್ಮ ವಿರುದ್ಧ ಕೊಲೆಯತ್ನದ ಪ್ರಕರಣ ದಾಖಲಿಸಿದೆ ಅಂತ ಅಶ್ವಥ್ ನಾರಾಯಣ ಹೇಳಿದ್ದಾರೆ. ಇತ್ತ ಸಿದ್ದರಾಮಯ್ಯ ಅವರಿಗೆ ಈಗಲೂ ಬಿಜೆಪಿಯಿಂದ ಜೀವ ಬೆದರಿಕೆ ಇದೆ ಅಂತ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಗಂಭೀರ ಆರೋಪ ಮಾಡಿದ್ದಾರೆ. ಜೊತೆಗೆ ಅಶ್ವತ್ ನಾರಾಯಣ್ ವಿರುದ್ಧ ನೀಡಿದ್ದ ದೂರಿನ ಮೇಲೆ ಕ್ರಮಕ್ಕೆ ಒತ್ತಾಯಿಸ್ತಿದೀವಿ. ಸಿದ್ದರಾಮಯ್ಯರಿಗೆ ಏನೇ ಆದರು ಅದಕ್ಕೆ ಬಿಜೆಪಿ, ಅಶ್ವತ್ ನಾರಾಯಣ್ ಹೊಣೆ. ಈ ಕೂಡಲೇ ಅಶ್ವಥ್ ನಾರಾಯಣ್ರನ್ನು ಪೊಲೀಸರು ಬಂಧಿಸಬೇಕು ಅಂತ ಹೇಳಿದ್ದಾರೆ.
-masthmagaa.com
Contact Us for Advertisement