ಎರಡು ವರ್ಷಗಳ ಕಾಯುವಿಕೆಗೆ ಬ್ರೇಕ್‌, ಅಂತೂ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ ಅರ್ಜುನ್‌ ತೆಂಡೂಲ್ಕರ್‌!

masthmagaa.com:

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ KKR ತಂಡದ ಬ್ಯಾಟರ್‌ ವೆಂಕಟೇಶ್ ಅಯ್ಯರ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಮೂಲಕ KKR ಪರ ಶತಕ ಬಾರಿಸಿದ 2ನೇ ಆಟಗಾರ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಐಪಿಎಲ್​ನಲ್ಲಿ 50 ಎಸೆತಗಳ ಒಳಗೆ ಸೆಂಚುರಿ ಸಿಡಿಸಿದ ವಿಶೇಷ ಸಾಧಕರ ಪಟ್ಟಿಗೂ ಸೇರ್ಪಡೆಯಾಗಿದ್ದಾರೆ. ಅಂದಹಾಗೆ 51 ಎಸೆತಗಳಲ್ಲಿ 9 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ನೊಂದಿಗೆ 104 ರನ್​ ಬಾರಿಸಿ ಮಿಂಚಿದ್ದಾರೆ. ಇತ್ತ ಇದೇ ಪಂದ್ಯದಲ್ಲಿ ಸಚಿನ್‌ ತೆಂಡೂಲ್ಕರ್‌ ಅವ್ರ ಪುತ್ರ ಅರ್ಜುನ್‌ ತೆಂಡೂಲ್ಕರ್‌ ಅವ್ರು ಮೊದಲ ಬಾರಿಗೆ ಐಪಿಎಲ್‌ನಲ್ಲಿ ಆಡುವ ಅವಕಾಶ ಪಡೆದಿದ್ದಾರೆ.

-masthmagaa.com

Contact Us for Advertisement

Leave a Reply