ಲಖೀಂಪುರ ಹಿಂಸಾಚಾರ… ಕರ್ನಾಟಕದಲ್ಲಿ ಬಿಜೆಪಿ, ಕಾಂಗ್ರೆಸ್ ಗಲಾಟೆ!

masthmagaa.com:

ಬ್ರಿಟಿಷರ ಬೂಟಿನ ರುಚಿ ಕಂಡಿರುವ ಬಿಜೆಪಿಗರು ಬ್ರಿಟಿಷರಿಗಿಂತ ಕ್ರೂರಿಗಳಾಗಿದ್ದಾರೆ ಕಾಂಗ್ರೆಸ್ ಕಿಡಿಕಾರಿದೆ. ನಿನ್ನೆ ಮಾತಾಡಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​, ಬ್ರಿಟಿಷರು ಕೂಡ ಗೌರವದಿಂದ ನೋಡಿಕೊಳ್ತಿದ್ರು ಅಂತ ಹೇಳಿದ್ರು. ಡಿಕೆಶಿ ಹೇಳಿಕೆಯನ್ನು ಟ್ವೀಟ್ ಮಾಡಿದ್ದ ಬಿಜೆಪಿ ದೇಶವನ್ನು ಸುದೀರ್ಘ ಕಾಲ ದಾಸ್ಯಕ್ಕೆ ತಳ್ಳಿದ ಬ್ರಿಟಿಷರ ಬಗ್ಗೆ ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆಡಿದ ಮಾತುಗಳಿವು ಅಂತ ತಿರುಗೇಟು ನೀಡಿತ್ತು. ಅದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌, ಬ್ರಿಟಿಷರು ಅಹಿಂಸಾ ಸತ್ಯಾಗ್ರಹಕ್ಕೆ ಮಣಿದಿದ್ರು. ಆದ್ರೆ ಬಿಜೆಪಿಗರು ರೈತರ ಅಹಿಂಸಾ ಪ್ರತಿಭಟನೆಯಲ್ಲಿ ಮಾರಣಹೋಮ ನಡೆಸಿದ್ರು. ಹೊರಗಿನವರ ದೌರ್ಜನ್ಯಕ್ಕಿಂತ ಒಳಗಿನವರ ದೌರ್ಜನ್ಯವೇ ಹೆಚ್ಚು ಆಘಾತಕಾರಿ ಅಂತ ವಾಗ್ದಾಳಿ ನಡೆಸಿದೆ.

-masthmagaa.com

Contact Us for Advertisement

Leave a Reply