masthmagaa.com:
ಬಿಜೆಪಿ-ಜೆಡಿಎಸ್ ಮೈತ್ರಿ ಘೋಷಣೆಯಾದ ಬಳಿಕ ಹಲವು ಬಿಜೆಪಿ ನಾಯಕರು ಕಾಂಗ್ರೆಸ್ಗೆ ಕಡೆ ಮುಖ ಮಾಡ್ತಿದ್ದಾರೆ. ಇದೀಗ ಬಿಜೆಪಿ ಮುಖಂಡ, ಮಾಜಿ ಶಾಸಕ ರಾಮಪ್ಪ ಲಮಾಣಿ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ್ದಾರೆ. ಬಳಿಕ ಮಾತಾಡಿರುವ ರಾಮಪ್ಪ , ಬಿಜೆಪಿಯಲ್ಲಿ ಆಗಿರುವ ನೋವಿನಿಂದ ಆ ಪಕ್ಷ ತೊರೆದಿದ್ದು, ಯಾವುದೇ ಷರತ್ತು ಇಲ್ಲದೇ ಕಾಂಗ್ರೆಸ್ ಸೇರಿದ್ದೇನೆ ಅಂತ ಹೇಳಿದ್ದಾರೆ. ಜೊತೆಗೆ ಮಾಜಿ ಸಿಎಂ ಜಗದೀಶ ಶೆಟ್ಟರ್ ಹಾಗೂ ಡಿ.ಕೆ. ಶಿವಕುಮಾರ್ ಅವರು ಉತ್ತರ ಕರ್ನಾಟಕ ಭಾಗದ ಅನೇಕ ನಾಯಕರಿ ಗಾಳ ಹಾಕಿದ್ದಾರೆ. ಮುಂದಿನ ದಿನಗಳಲ್ಲಿ ಅನೇಕರು ಕಾಂಗ್ರೆಸ್ ಸೇರಲಿದ್ದಾರೆ ಅಂತ ರಾಮಪ್ಪ ಹೇಳಿದ್ದಾರೆ. ಇದೇ ವೇಳೆ ಮಾತಾಡಿರುವ ಶಿವಕುಮಾರ್, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಬೋದಾದ ಉತ್ತರ ಮತ್ತು ದಕ್ಷಿಣ ಕರ್ನಾಟಕದ ದೊಡ್ಡ ಪಟ್ಟಿಯನ್ನ ಶೆಟ್ಟರ್ ಮತ್ತು ಲಕ್ಷ್ಮಣ್ ಸವದಿ ನನ್ನ ಬಳಿ ಚರ್ಚೆ ಮಾಡಿದ್ದಾರೆ. ವಿವಿಧ ಪಕ್ಷಗಳ 42ಕ್ಕೂ ಹೆಚ್ಚು ಮುಖಂಡರ ಅರ್ಜಿಗಳು ನನ್ನ ಬಳಿ ಇವೆ. ಆ ಹೆಸರುಗಳನ್ನ ಈಗಲೇ ರಿವೀಲ್ ಮಾಡೋದಿಲ್ಲ ಅಂತ ಹೇಳಿದ್ದಾರೆ.
-masthmagaa.com
Contact Us for Advertisement