masthmagaa.com:
ಜಮ್ಮು ಕಾಶ್ಮೀರದ ನಾಲ್ವರು ಮಾಜಿ ಸಿಎಂಗಳಿಗೆ ನೀಡಲಾಗಿದ್ದ, ಎಸ್ಎಸ್ಜಿ ಭದ್ರತೆಯನ್ನು ವಾಪಸ್ ಪಡೆಯಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಫಾರೂಕ್ ಅಬ್ದುಲ್ಲಾ, ಅವರ ಮಗ ಒಮರ್ ಅಬ್ದುಲ್ಲಾ, ಪಿಡಿಪಿ ಪಕ್ಷದ ಮೆಹಬೂಬಾ ಮುಫ್ತಿ ಮತ್ತು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ಗೆ ನೀಡಲಾಗಿದ್ದ ಈ ಭದ್ರತೆಯನ್ನು ವಾಪಸ್ ಪಡೆಯಲು ಕೇಂದ್ರ ಸರ್ಕಾರದ ಭದ್ರತಾ ಪರಿಶೀಲನೆ ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ವಿಶೇಷ ಭದ್ರತಾ ಪಡೆಯನ್ನು ಜಮ್ಮು ಕಾಶ್ಮೀರದ ಸಿಎಂ ಮತ್ತು ಮಾಜಿ ಸಿಎಂಗಳ ಭದ್ರತೆಗಾಗಿ ಸ್ಥಾಪಿಸಲಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರೋ ಮಾಜಿ ಸಿಎಂಗಳು, ನಮಗೆ ಈ ಬಗ್ಗೆ ಮಾಹಿತಿಯೇ ನೀಡಿಲ್ಲ. ಇದು ರಾಜಕೀಯ ಪ್ರೇರಿತ ನಿರ್ಧಾರ ಅಂತ ಕಿಡಿಕಾರಿದ್ದಾರೆ.
-masthmagaa.com
Contact Us for Advertisement