masthmagaa.com:
ಕರ್ನಾಟಕದ ‘ಸಿಂಗಂ’ ಎಂದೇ ಖ್ಯಾತಿ ಪಡೆದಿದ್ದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಬಿಜೆಪಿ ಸೇರಿದ್ದಾರೆ. ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ವೇಳೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರಳಿಧರ ರಾವ್ ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷ ಮುರುಗನ್ ಉಪಸ್ಥಿತರಿದ್ದರು.
ಅಣ್ಣಾಮಲೈ ಕುಪ್ಪುಸಾಮಿ ಮೂಲತಃ ತಮಿಳುನಾಡಿನ ಕರೂರ್ನವರು. 2011ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದ ಅವರು 2019ರಲ್ಲಿ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಆಗಿದ್ದಾಗ ಪೊಲೀಸ್ ಸೇವೆಗೆ ಗುಡ್ಬೈ ಹೇಳಿದ್ರು.
ತಮಿಳುನಾಡಿನಲ್ಲಿ ರಾಜಕೀಯ ಮತ್ತು ಸಾಮಾಜಿಕ ಬದಲಾವಣೆ ತರಲು ಬಿಜೆಪಿ ಸೇರುತ್ತಿದ್ದೇನೆ ಅಂತ ಅಣ್ಣಾಮಲೈ ಹೇಳಿದ್ದಾರೆ. ಮುಂದಿನ ವರ್ಷ ಅಂದ್ರೆ 2021ರಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದೆ. ಆ ಚುನಾವಣೆಯಲ್ಲಿ ಅಣ್ಣಾಮಲೈ ಸ್ಪರ್ಧಿಸುವ ಎಲ್ಲಾ ಸಾಧ್ಯತೆಗಳಿವೆ.
ಸದ್ಯ ತಮಿಳುನಾಡಿನಲ್ಲಿ ಬಿಜೆಪಿ ಅಷ್ಟಕ್ಕಷ್ಟೇ ಎಂಬಂತಿದೆ. ಆದ್ರೀಗ ಅಣ್ಣಾಮಲೈ ಸೇರ್ಪಡೆಯಿಂದ ಬಿಜೆಪಿಯ ಚಿತ್ರಣವೇ ಬದಲಾಗುವ ಸಾಧ್ಯತೆ ಇದೆ ಎನ್ನಲಾಗ್ತಿದೆ.
-masthmagaa.com
Contact Us for Advertisement