ಮಾಜಿ ಸಿಎಂ ಎಸ್‌ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು! ಆಸ್ಪತ್ರೆಗೆ ಸಿಎಂ ಭೇಟಿ!

masthmagaa.com:

ಭಾರತದ ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಸಿಎಂ ಎಸ್‌ ಎಂ ಕೃಷ್ಣ ಅವರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶ್ವಾಸಕೋಶ ಸೊಂಕಿನಿಂದ ಬಳಲುತ್ತಿರುವ ಎಸ್‍ಎಂ ಕೃಷ್ಣಗೆ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಶ್ವಾಸಕೋಶದ ಒಳಗಡೆ ಆಕ್ಸಿಜನ್ ಪ್ರಮಾಣ ಏರುಪೇರು ಆಗ್ತಾ ಇದ್ದು, ವೈದ್ಯರ ತಂಡ ನಿಗಾವಹಿಸಿದೆ ಅಂತ‌ ಹೆಲ್ತ್‌ ಬುಲೆಟಿನ್‌ನಲ್ಲಿ ತಿಳಿಸಲಾಗಿದೆ. ಇನ್ನು ಇದರ ಬೆನ್ನಲ್ಲೇ ಸಿಎಂ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ಭೇಟಿನೀಡಿದ್ದು ಮಾಜಿ ಸಿಎಂಗಳ ಆರೋಗ್ಯ ವಿಚಾರಿಸಿದ್ದಾರೆ. ಇನ್ನು ಎರಡು ಮೂರು ದಿನಗಳಲ್ಲಿ ಅವರು ಡಿಸ್ಜಾರ್ಜ್‌ ಆಗ್ತಾರೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಯಾರು ಆತಂಕಕ್ಕೆ ಒಳಗಾಗಬಾರದು, ಗಾಬರಿ ಬೇಡ ಅಂತ ಸಿಎಂ ಬಸವರಾಜಬೊಮ್ಮಾಯಿ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply