masthmagaa.com:
ಮಮತಾ ಬ್ಯಾನರ್ಜಿ ಅವರ ಟಿಎಂಸಿ ಪಕ್ಷಕ್ಕೆ ರಾಜೀನಾಮೆ ನೀಡಿ ನಿನ್ನೆಯಷ್ಟೇ ಬಿಜೆಪಿಗೆ ಸೇರಿದ್ದ ರಜಿಬ್ ಬ್ಯಾನರ್ಜಿ ಸೇರಿದಂತೆ ಹಲವು ನಾಯಕರು ಇವತ್ತು ಪಶ್ಚಿಮ ಬಂಗಾಳದಲ್ಲಿ ಶಕ್ತಿಪ್ರದರ್ಶನ ನಡೆಸಿದ್ದಾರೆ. ಹೌರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೇರಿದಂತೆ ಹಲವರು ಭಾಗವಹಿಸಿದ್ರು. ಅದೇ ಕಾರ್ಯಕ್ರಮದಲ್ಲಿ ಟಿಎಂಸಿಯ ಮಾಜಿ ನಾಯಕರು ಭಾಗವಹಿಸಿ ತಮ್ಮ ಮಾಜಿ ಪಕ್ಷ, ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷ ಈಗ ಪ್ರೈವೆಟ್ ಲಿಮಿಟೆಡ್ ಕಂಪನಿ ರೀತಿ ಆಗಿದೆ. ಫೆಬ್ರವರಿ 28ರ ಒಳಗೆ ಈ ಪ್ರೈವೆಟ್ ಲಿಮಿಟೆಡ್ ಕಂಪನಿ ಖಾಲಿ ಆಗುತ್ತೆ ಅಂತ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಹೇಳಿದ್ದಾರೆ. ಈ ಮೂಲಕ ಇನ್ನೊಂದಷ್ಟು ಟಿಎಂಸಿ ಶಾಸಕರು, ಸಚಿವರು, ನಾಯಕರು ಬಿಜೆಪಿಗೆ ಬರೋರಿದ್ದಾರೆ ಅನ್ನೋ ಮುನ್ಸೂಚನೆ ಕೊಟ್ಟಿದ್ದಾರೆ.
-masthmagaa.com
Contact Us for Advertisement