masthmagaa.com:
ಬಿಹಾರದ ಹಿರಿಯ ರಾಜಕಾರಣಿ, ಮಾಜಿ ಕೇಂದ್ರ ಸಚಿವ ಮತ್ತು ಆರ್ಜೆಡಿ ಮಾಜಿ ನಾಯಕ ರಘುವಂಶ್ ಪ್ರಸಾದ್ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 74 ವರ್ಷದ ಅವರು ಎರಡು ದಿನಗಳ ಹಿಂದಷ್ಟೇ ಲಾಲು ಪ್ರಸಾದ್ ಯಾದವ್ ಅವರ ಆರ್ಜೆಡಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಇದಕ್ಕೆ ಪ್ರತಿಯಾಗಿ ಜೈಲಿನಿಂದಲೇ ಪತ್ರ ಬರೆದಿದ್ದ ಲಾಲು ಪ್ರಸಾದ್ ಯಾದವ್, ‘ನೀವು ಎಲ್ಲೂ ಹೋಗುತ್ತಿಲ್ಲ. ಗುಣಮುಖರಾಗಿ ಬನ್ನಿ, ನಂತರ ಮಾತನಾಡೋಣ’ ಅಂತ ಹೇಳಿದ್ದರು. ಆದ್ರೀಗ ರಘುವಂಶ್ ಪ್ರಸಾದ್ ಅವರೇ ಇಲ್ಲವಾಗಿದ್ದಾರೆ.
ಅಂದ್ಹಾಗೆ ರಘುವಂಶ್ ಪ್ರಸಾದ್ ಸಿಂಗ್ಗೆ ಜೂನ್ನಲ್ಲಿ ಕೊರೋನಾ ಸೋಂಕು ದೃಢಪಟ್ಟಿತ್ತು. ಬಳಿಕ ಪಾಟ್ನಾದ ಏಮ್ಸ್ಗೆ ದಾಖಲಾಗಿದ್ದರು. ನಂತರದಲ್ಲಿ ದೆಹಲಿಯ ಏಮ್ಸ್ಗೆ ಶಿಫ್ಟ್ ಮಾಡಲಾಗಿತ್ತು. ಕಳೆದ ಎರಡು ದಿನಗಳಿಂದ ಆರೋಗ್ಯ ತುಂಬಾ ಹದಗೆಟ್ಟಿತ್ತು, ಅವರನ್ನು ವೆಂಟಿಲೇಟರ್ನಲ್ಲಿ ಇಡಲಾಗಿತ್ತು. ಉಸಿರಾಡಲು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದ ಅವರು ಭಾನುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಉಸಿರು ನಿಲ್ಲಿಸಿದ್ದಾರೆ. ಹಿರಿಯ ರಾಜಕಾರಣಿಯ ಅಗಲಿಕೆಗೆ ರಾಷ್ಟ್ರಪತಿ ರಾಮ್ನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
-masthmagaa.com
Contact Us for Advertisement