masthmagaa.com:
ಮಾಜಿ ಕೇಂದ್ರ ಸಚಿವ, ಸಂಯುಕ್ತ ಜನತಾದಳದ ಮಾಜಿ ಅಧ್ಯಕ್ಷ ಶರದ್ ಯಾದವ್ ನಿನ್ನೆ ರಾತ್ರಿ ದೆಹಲಿಯಲ್ಲಿ ನಿಧನರಾಗಿದ್ದಾರೆ. 75 ವರ್ಷ ವಯಸ್ಸಿನ ಯಾದವ್ ಅವ್ರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ರು. ಇವರ ನಿಧನಕ್ಕೆ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಹಲವು ರಾಜಕೀಯ ನಾಯಕರು ಕಂಬನಿ ಮಿಡಿದಿದ್ದಾರೆ. ಇತ್ತ ಹರಿಯಾಣದ ಮಾಜಿ ಸಚಿವ ಮಂಗೇ ರಾಮ್ ರಾಠಿ ಅವ್ರ ಪುತ್ರ ಜಗದೀಶ್ ರಾಠಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ರಾಷ್ಟ್ರೀಯ ಲೋಕದಳ ರಾಜ್ಯ ಮುಖ್ಯಸ್ಥ ನಫೆ ಸಿಂಗ್ ರಾಠಿ ಸೇರಿದಂತೆ 6 ಜನರ ಮೇಲೆ ಕೇಸ್ ದಾಖಲಿಸಲಾಗಿದೆ.
-masthmagaa.com
Contact Us for Advertisement