ಸಿಂಧಿಯಾ ಕಾರಿನ ಮೇಲೆ ದಾಳಿ: ಶಿವರಾಜ್ ಸಿಂಗ್ ಚೌವ್ಹಾಣ್ ಕೆಂಡ

masthmagaa.com

ಮಧ್ಯಪ್ರದೇಶ: ಇತ್ತೀಚೆಗಷ್ಟೇ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ ಜ್ಯೋತಿರಾದಿತ್ಯ ಸಿಂಧಿಯಾ ಕಾರಿನ ಮೇಲೆ ದಾಳಿ ನಡೆದಿದೆ ಅಂತ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌವ್ಹಾಣ್ ಆರೋಪಿಸಿದ್ದಾರೆ.

ಈ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಕೆಂಡಕಾರಿರುವ ಅವರು, ಜ್ಯೋತಿರಾದಿತ್ಯ ಸಿಂಧಿಯಾಗೆ ಕಪ್ಪು ಬಾವುಟ ತೋರಿಸಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ರಾಜ್ಯದಲ್ಲಿ ಯಾವ ರೀತಿಯ ಪರಿಸ್ಥಿತಿ ಇದೆ ಅಂತ ಈ ಘಟನೆ ಮೂಲಕ ಊಹಿಸಬಹುದು. ನಾನು ಈ ಘಟನೆಯನ್ನು ಖಂಡಿಸುತ್ತೇನೆ. ಮತ್ತು ಪೊಲೀಸರು ಮತ್ತು ಸರ್ಕಾರ  ಘಟನೆಗೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಹೋಗಿದೆ. ಸಿಂಧಿಯಾ ಕಾರಿನ ಮೇಲೆ ಕಲ್ಲು ತೂರಲಾಗಿದ್ದು, ಡ್ರೈವರ್ ಕಷ್ಟದಲ್ಲಿ ಸ್ಥಳದಿಂದ ಜ್ಯೋತಿರಾದಿತ್ಯ ಸಿಂಧಿಯಾರನ್ನು ಕರೆದುಕೊಂಡು ಹೋಗಿದ್ದಾರೆ. ಇದು ಅತ್ಯಂತ ಅಪಾಯಕಾರಿಯಾದ ದಾಳಿ ಅಂತ ಹೇಳಿದ್ದಾರೆ.

ಅಲ್ಲದೆ ಘಟನೆಗೆ ಕಾರಣವಾದ ದುಷ್ಕರ್ಮಿಗಳ ವಿರುದ್ಧ ಎಫ್​​ಐಆರ್ ದಾಖಲಿಸುವಂತೆ ಒತ್ತಾಯಿಸಿ ಶ್ಯಾಮ್ಲಾ ಹಿಲ್ಸ್ ಪೊಲೀಸ್ ಠಾಣೆ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಕೂಡ ನಡೆಸಿದ್ದಾರೆ.

-masthmagaa.com

Contact Us for Advertisement

Leave a Reply