masthmagaa.com:
ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ನಾಡಹಬ್ಬ ದಸರಾಗೆ ಭಾರೀ ಸಿದ್ದತೆ ನಡೆಸಲಾಗ್ತಿದೆ. ಈ ನಡುವೆ ನಗರದಲ್ಲಿ ಏರ್ ಶೋ ಆಯೋಜನೆ ಮಾಡಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಜನರನ್ನು ಆಕರ್ಷಿಸುವ ಏರ್ ಶೋ ಆಯೋಜನೆಗೆ ಅನುಮತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಬಳಿ ಮನವಿ ಮಾಡಿದ್ದರು. ಇದೀಗ ಅವರ ಕೋರಿಕೆಗೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದೆ. ಈ ಹಿನ್ನಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರು, ಬನ್ನಿಮಂಟಪದ ಮೈದಾನಕ್ಕೆ ಭೇಟಿ ನೀಡಿ ಸ್ಧಳ ಹಾಗೂ ಏರ್ ಶೋ ನಡೆಸಲು ಬೇಕಾದ ರೂಪುರೇಷೆ ಕುರಿತು ಪರಿಶೀಲನೆ ನಡೆಸಿದ್ದಾರೆ.
-masthmagaa.com
Contact Us for Advertisement