ಸಿಎಂ ಸ್ಥಾನ ಕೊಟ್ರೆ ಬೆಂಬಲ..! ಹರಿಯಾಣದಲ್ಲಿ ಚೌಟಾಲಾ ಆಫರ್​..!

ಹರಿಯಾಣ ವಿಧಾನಸಭೆ ಚುನಾವಣೆ ಫಲಿತಾಂಶ ಅತಂತ್ರದತ್ತ ಸಾಗಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಫುಲ್ ಟೆನ್ಶನ್​​ನಲ್ಲಿದ್ದು, ತಮ್ಮ ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದಾರೆ. ಈ ನಡುವೆ ಹರಿಯಾಣದ ಜೆಜೆಪಿ(ಜನನಾಯಕ ಜನತಾ ಪಕ್ಷ)ಯ ನಾಯಕ ದುಷ್ಯಂತ್ ಚೌಟಾಲಾ ಒಂದು ಆಫರ್ ಕೊಟ್ಟಿದ್ದಾರೆ. ನಮಗೆ ಯಾರು ಸಿಎಂ ಸ್ಥಾನ ಕೊಡ್ತಾರೋ ಅವರಿಗೆ ನಮ್ಮ ಬೆಂಬಲ ಎಂದು ಅನೌನ್ಸ್ ಮಾಡಿದ್ದಾರೆ. ಹರಿಯಾಣಾ ವಿಧಾನಸಭೆಯಲ್ಲಿ ಬಹುಮತಕ್ಕೆ 46 ಕ್ಷೇತ್ರಗಳಲ್ಲಿ ಗೆಲ್ಲಬೇಕು. ಬಿಜೆಪಿ ಸುಮಾರು 37ರಿಂದ 38 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್​​ 32 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇನ್ನು ಜೆಜೆಪಿ 10 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಹೀಗಾಗಿ ಮಾಧ್ಯಮಗಳ ಜೊತೆ ಮಾತನಾಡಿದ ದುಷ್ಯಂತ್ ಚೌಟಾಲಾ, ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳನ್ನು ಹರಿಯಾಣದ ಜನತೆ ತಿರಸ್ಕರಿಸಿದ್ದಾರೆ. ಹೀಗಾಗಿ ನಮಗೆ ಯಾರು ಸಿಎಂ ಸ್ಥಾನ ನೀಡುತ್ತಾರೋ ಅವರಿಗೆ ಬೆಂಬಲ ನೀಡುತ್ತೇವೆ ಎಂದು ಘೋಷಿಸಿದ್ದಾರೆ.

 

Contact Us for Advertisement

Leave a Reply