masthmagaa.com:
ಇಡೀ ಕರ್ನಾಟಕದಲ್ಲೇ ತಾಲೂಕು ಕ್ಷೇತ್ರಕ್ಕೆ ಮೆಡಿಕಲ್ ಕಾಲೇಜು ಘೋಷಿಸಿಕೊಂಡು ವಿವಾದಕ್ಕೆ ಕಾರಣವಾಗಿದ್ದ ಡಿಸಿಎಂ ಡಿಕೆ ಶಿವಕುಮಾರ್ ಈಗ ಕನಕಪುರವನ್ನ ಬೆಂಗಳೂರಿಗೆ ಸೇರಿಸೋಕೆ ಮುಂದಾಗಿದ್ದಾರೆ. ಕಾರ್ಯಕ್ರಮ ಒಂದ್ರಲ್ಲಿ ಮಾತಾಡಿರೋ ಡಿಕೆ, ‘ನಾವು ರಾಮನಗರದವರಲ್ಲ. ನಾವು ಬೆಂಗಳೂರು ಜಿಲ್ಲೆಗೆ ಸೇರಿದವರು. ಮುಂದೊಂದು ದಿನ ಕನಕಪುರ ಬೆಂಗಳೂರು ವ್ಯಾಪ್ತಿಗೆ ಸೇರಲಿದೆ.’ ಅಂತ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕನಕಪುರದಲ್ಲಿ ದೇವಸ್ಥಾನವೊಂದ್ರ ಜೀರ್ಣೋದ್ಧಾರ ಭೂಮಿಪೂಜೆಯೊಂದ್ರಲ್ಲಿ ಮಾತಾಡ್ತಾ, ನಾನು ನಿಮ್ಮ ಜೇಬಿಗೆ ದುಡ್ಡು ಹಾಕೋಕೆ, ಅಥವಾ ಮನೆ ಕಟ್ಸಿ ಕೊಡೋಕೆ ಆಗಲ್ಲ. ಆದ್ರೆ ನಿಮ್ಮ ಆಸ್ತಿ ಮೌಲ್ಯ 10 ಪಟ್ಟು ಹೆಚ್ಚಿಸೋ ಶಕ್ತಿ ಆ ದೇವ್ರು ನಂಗೆ ಕೊಟ್ಟಿದಾನೆ ಅಂತ ಹೇಳಿದ್ದಾರೆ. ಆಗ ಜನರು ಕನಕಪುರವನ್ನ ಬೆಂಗಳೂರಿಗೆ ಸೇರಿಸ್ತೀರಾ ಅಂದಿದ್ದಕ್ಕೆ, ಹೌದು ಅದನ್ನ ಮಾಡ್ತೀನಿ. ಯಾವುದೇ ಕಾರಣಕ್ಕೂ ಇಲ್ಲಿನ ರೈತರು ತಮ್ಮ ಭೂಮಿಯನ್ನ ಬೆಂಗಳೂರಿನವರಿಗೆ ಮಾರಾಟ ಮಾಡ್ಬಾರ್ದು. ಒಂದಲ್ಲ ಒಂದು ದಿನ ಇಲ್ಲಿನ ಗ್ರಾಮಗಳು ಬೆಂಗಳೂರಿಗೆ ಸೇರುತ್ತವೆ. ಭೂಮಿಗೆ ಅಡಿ ಲೆಕ್ಕದಲ್ಲಿ ಬೆಲೆ ಕಟ್ಟಲಾಗುತ್ತೆ ಅಂತ ಹೇಳಿದ್ದಾರೆ. ಈ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದ್ದು, ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕನಕಪುರ ಸುತ್ತಮುತ್ತ ಇರೋ ತಮ್ಮ ಆಸ್ತಿಗಳ ಮೌಲ್ಯವನ್ನು ಹೆಚ್ಚಿಸಿಕೊಂಡು ಖಜಾನೆ ವೃದ್ಧಿ ಮಾಡಿಕೊಳ್ಳುವ ಏಕೈಕ ದುರುದ್ದೇಶದಿಂದ ಡಿಕೆ ಶಿವಕುಮಾರ್ ಆ ಹೇಳಿಕೆ ನೀಡಿದ್ದಾರೆ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಕ್ಕೆ ರಿಯಾಕ್ಟ್ ಮಾಡಿರುವ ಡಿಕೆಶಿ, ಈ ದೇಶಕ್ಕೆ ವಿದ್ಯಾವಂತರು ಇಲ್ಲಿದಿದ್ದರೂ, ಬುದ್ದಿವಂತರು ಇಲ್ಲದಿದ್ದರೂ ಪ್ರಜ್ಞಾವಂತರು ಬೇಕು. ನಾನು ಕುಮಾರಸ್ವಾಮಿ ಅವರು ಸಿಎಂ ಆದವರು ಪ್ರಜ್ಞಾವಂತರು ಅಂದುಕೊಂಡಿದ್ದೆ. ಕುಮಾರಸ್ವಾಮಿಗೆ ಕಾಮನ್ ಸೆನ್ಸ್ ಇಲ್ಲ. ಅವರ ತಂದೆಯವರ ಬಳಿ ಕೇಳಿ ತಿಳಿದುಕೊಳ್ಳಬೇಕು. ಇಡೀ ರಾಮನಗರ ಜಿಲ್ಲೆ ಬೆಂಗಳೂರಿಗೆ ಸೇರಿದ್ದು. ರಾಮನಗರ ಜಿಲ್ಲೆಗೆ ಸಂಬಂಧಿಸಿದಂತೆ ಬ್ಲೂ ಪ್ರಿಂಟ್ ನಾವು ರೆಡಿ ಮಾಡುತ್ತಿದ್ದೇವೆ. ಕುಮಾರಸ್ವಾಮಿ ಹೇಳಿಕೆಗಳಿಗೆ ನಾನು ತಲೆಕೆಡಿಸಿಕೊಳ್ಳಲ್ಲ ಅಂತ ತಿರುಗೇಟು ನೀಡಿದ್ದಾರೆ.
-masthmagaa.com
Contact Us for Advertisement