ನಾಮಪತ್ರ ಸಲ್ಲಿಕೆಗೆ ಮೂಹರ್ತ ನಿಗದಿ ಪಡಿಸಿದ ಕುಮಾರಣ್ಣ!

masthmagaa.com:

ರಾಜ್ಯ ವಿಧಾನಸಭೆಗೆ ಏಪ್ರಿಲ್‌ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಏಪ್ರಿಲ್‌ 19 ರಂದು ನಾಮಪತ್ರ ಸಲ್ಲಿಕೆಗೆ ಜೆಡಿಎಸ್‌ ನಾಯಕ ಹೆಚ್‌ಡಿ ಕುಮಾರಸ್ವಾಮಿ ಮೂಹರ್ತ ನಿಗದಿ ಮಾಡಿಕೊಂಡಿದ್ದಾರೆ. ಏಪ್ರಿಲ್‌ 19 ರಂದು ಚನ್ನಪಟ್ಟಣದಲ್ಲಿ ನಾಮಪತ್ರ ಸಲ್ಲಿಸುತ್ತೇನೆ. ಹಾಗೇ ಏಪ್ರಿಲ್‌ 20 ಹಾಗೂ 21 ರಂದು ಕ್ಷೇತ್ರದಲ್ಲಿ ಪ್ರಚಾರ ಮಾಡ್ತೀನಿ ಅಂತ ಕುಮಾರಸ್ವಾಮಿ ಹೇಳಿದ್ದಾರೆ. ಇದೇ ವೇಳೆ ಏಪ್ರಿಲ್‌ 17ರಂದು ಪುತ್ರ ನಿಖಿಲ್‌ ಕುಮಾರಸ್ವಾಮಿ ರಾಮನಗರದಲ್ಲಿ ನಾಮಪತ್ರ ಸಲ್ಲಿಸ್ತಾರೆ ಎಂದಿದ್ದಾರೆ.

-masthmagaa.com

Contact Us for Advertisement

Leave a Reply