ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊಲೆಯಾದ ಮೂವರಿಗೂ 5 ಲಕ್ಷ ಘೋಷಿಸಿದ HDK!

masthmagaa.com:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಮೂವರು ಮೃತ ವ್ಯಕ್ತಿಗಳ ಮನೆಗಳಿಗೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಭೇಟಿಯಾಗಿದ್ದಾರೆ. ಈ ವೇಳೆ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದು ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ಇನ್ನು ಈ ಮೂವರು ಹತ್ಯೆಗೈದ ಹಂತಕರನ್ನ ಆಗಸ್ಟ್‌ 5 ದಿನದಲ್ಲಿ ಬಂಧಿಸದಿದ್ದರೆ ಸತ್ಯಾಗ್ರಹ ಮಾಡೋದಾಗಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಇನ್ನು ಸಿಎಂ ಬಸವರಾಜ ಬೊಮ್ಮಾಯಿ ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರ್‌ ಮನೆಗೆ ಮಾತ್ರ ಭೇಟಿ ನೀಡಿದ್ದಾರೆ. ಆದ್ರೆ ಹತ್ಯೆಯಾದ ಇನ್ನಿಬ್ಬರ ಮನೆಗೆ ಭೇಟಿ ನೀಡದೆ ತಾರತಮ್ಯ ಮಾಡಿದ್ದಾರೆ ಅಂತ ಆಕ್ರೋಶ ಭುಗಿಲೆದ್ದಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರೋ ಸಿಎಂ ಬೊಮ್ಮಾಯಿ ಕೊಲೆಯಾದ ಫಾಜಿಲ್, ಮಸೂದ್ ಮುಂಬುರುವ ದಿನಗಳಲ್ಲಿ ಭೇಟಿ ಮಾಡ್ತೀನಿ ಅಂತ ಹೇಳಿದ್ರು.

-masthmagaa.com

Contact Us for Advertisement

Leave a Reply