masthmagaa.com:
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಅಂತ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ವಿವಾದ ಸೃಷ್ಟಿಸಿದ್ರು. ಈ ವಿಚಾರವಾಗಿ ಈಗ ಖುದ್ದು ಎಚ್ಡಿ ಕುಮಾರಸ್ವಾಮಿ ಕ್ಷಮೆ ಕೇಳಿದ್ದಾರೆ. ನನ್ನ ಹೇಳಿಕೆಯಿಂದ ರಾಜ್ಯದ ಮಹಿಳೆಯರಿಗೆ ನೋವಾಗಿದ್ರೆ ವಿಷಾದ ವ್ಯಕ್ತಪಡಿಸ್ತೇನೆ ಅಂದಿದ್ದಾರೆ. ಇದಕ್ಕೆ ರಿಪ್ಲೈ ಮಾಡಿರೋ ಡಿಸಿಎಂ ಡಿಕೆ ಶಿವಕುಮಾರ್, ಕುಮಾರಸ್ವಾಮಿಯ ವಿಷಾದ ನಮಗೆ ಬೇಡ ಅಂತ ಏಕವಚನ ಬಳಸಿ ಟೀಕಿಸಿದ್ದಾರೆ. ಅಲ್ಲದೆ ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ ಈ ಬಗ್ಗೆ ಹೋರಾಟ ಆಗ್ಬೇಕು. ಒಂದು ಪಕ್ಷದ ಅಧ್ಯಕ್ಷನಾಗಿ ನಾನು ಈ ರೀತಿ ಕರೆ ಕೊಡ್ತಿದ್ದೇನೆ. ನಿಮ್ಮ ಸ್ವಾಭಿಮಾನ ಉಳಿಸಿಕೊಳ್ಳೋಕೆ ಮಹಿಳೆಯರೆಲ್ಲಾ ಪ್ರತಿಭಟನೆ ಮಾಡಿ ಅಂತ ಕುಮಾರಸ್ವಾಮಿಯವರ ವಿರುದ್ದ ಹೋರಾಟಕ್ಕೆ ಡಿಕೆ ಕರೆ ಕೊಟ್ಟಿದ್ದಾರೆ.
-masthmagaa.com
Contact Us for Advertisement