masthmagaa.com:
ರಾಜ್ಯದಲ್ಲಿ ವರ್ಷಧಾರೆ ಮುಂದುವರೆದಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ ಮಳೆಯಾಗಿದ್ದು, ಮುಂದಿನ 5 ದಿನಗಳು ಅಂದ್ರೆ ಜೂನ್ 2ರವರೆಗೆ ನಗರದ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ವೇಳೆ ಗಾಳಿಯ ವೇಗ ಪ್ರತಿ ಗಂಟೆಗೆ 40 ಕಿಲೋಮೀಟರ್ ವೇಗದಲ್ಲಿ ಬೀಸಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಬೆಂಗಳೂರು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದೇ ವೇಳೆ ರಾಜ್ಯದ ಕೆಲವು ಭಾಗಗಳಲ್ಲಿ ಭಾರಿ ಮಳೆಯಿಂದಾಗಿ ವಿದ್ಯುತ್ ಕಡಿತದ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಇತ್ತ ಬೆಂಗಳೂರಿನಲ್ಲಿ ಪ್ರವಾಹ ತಡೆಗಟ್ಟಲು ಕ್ರಮಗಳನ್ನ ಕೈಗೊಳ್ಳುವಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಅವ್ರು ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.
-masthmagaa.com
Contact Us for Advertisement