ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ಮಳೆ ಮುನ್ಸೂಚನೆ..

masthmagaa.com:

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಮೈಸೂರು ಜಿಲ್ಲೆ ಕೃಷ್ಣರಾಜನಗರ ತಾಲೂಕಿನ ಗಂಧನಹಳ್ಳಿ ಗ್ರಾಮದಲ್ಲಿ ಅತಿಹೆಚ್ಚು 231 ಮಿಲಿ ಮೀಟರ್ ಮಳೆಯಾಗಿದೆ. ಬೆಂಗಳೂರಿನ ವಿಚಾರಕ್ಕೆ ಬಂದ್ರೆ ಮಹದೇವಪುರದ ಹೊರಮಾವು-2ರಲ್ಲಿ 155 ಮಿಲಿ ಮೀಟರ್ ಮಳೆಯಾಗಿದೆ.

ಮುಂದಿನ 24 ಗಂಟೆಯಲ್ಲಿ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳ ಬಹುತೇಕ ಕಡೆ ಭಾರಿ ಮಳೆಯಾಗಲಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮೇ 19 ಬೆಳಗ್ಗೆ 8.30ರವರೆಗೆ ರೆಡ್​ ಅಲರ್ಟ್​ ಘೋಷಿಸಲಾಗಿದೆ. ರೆಡ್​ ಅಲರ್ಟ್ ಅಂದ್ರೆ ಈ ಜಿಲ್ಲೆಗಳ ಕೆಲವೊಂದುಕಡೆ ಭಾರಿ ಮಳೆಯಾಗೋ ಸಾಧ್ಯತೆ ಇದೆ. ಮೇ 19ರ ಬೆಳಗ್ಗೆಯಿಂದ ಮೇ 20ರ ಬೆಳಗ್ಗೆವರೆಗೆ ಈ 7 ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್ ಘೋಷಿಸಲಾಗಿದೆ.

ಇನ್ನು ಮಂಡ್ಯ, ಮೈಸೂರು, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಮೇ 19ರ ಬೆಳಗ್ಗೆವರೆಗೆ ಆರೆಂಜ್​ ಅಲರ್ಟ್ ಘೋಷಿಸಲಾಗಿದೆ. ಮೇ 19ರಿಂದ 20ರವರೆಗೆ ಈ ಜಿಲ್ಲೆಗಳಲ್ಲಿ ಯಾವುದೇ ಅಲರ್ಟ್​ ಇಲ್ಲ.

ಇನ್ನು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಹಾವೇರಿ, ಗದಗ, ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮೇ 19ರ ಬೆಳಗ್ಗೆವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೇ 19ರಿಂದ 20ರವರೆಗೆ ದಾವಣಗೆರೆ, ಚಿತ್ರದುರ್ಗ, ವಿಜಯಪುರ, ಕೊಪ್ಪಳ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಸೋ, ರಾಜ್ಯದ ಹಲವೆಡೆ ಇನ್ನೂ ಎರಡ್ಮೂರು ದಿನ ಮಳೆ ಆರ್ಭಟ ಮುಂದುವರಿಯಲಿದೆ. ವಿಶೇಷವಾಗಿ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ.

-masthmagaa.com

Contact Us for Advertisement

Leave a Reply