masthmagaa.com:
ರಾಜ್ಯ ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರೋ ಮಳೆಗೆ ಉಡುಪಿ ಜಿಲ್ಲೆ ತತ್ತರಿಸಿ ಹೋಗಿದೆ. ಮಳೆಗೆ ಸಂಬಂಧಿತ ದುರಂತಗಳಲ್ಲಿ ಇಲ್ಲಿಯವರೆಗೆ ಒಟ್ಟು 7 ಜನ ಮೃತಪಟ್ಟಿದ್ದಾರೆ. ಗಾಳಿ ಮಳೆಗೆ ಮನೆಗಳು ಕುಸಿದಿದ್ದು ಬಿದ್ದಿವೆ. ಭಾರಿ ಮಳೆಯಿಂದ ಸಾವನ್ನಪ್ಪಿರೋರ ಎರಡು ಕುಟುಂಬಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಿದ್ದಾರೆ.ಇದೇ ವೇಳೆ ಇತರೆ ಮೃತ ಕುಟುಂಬಗಳ ಮಾಹಿತಿ ಪಡೆದು ಪರಿಹಾರ ನೀಡಲಾಗುತ್ತೆ ಅಂತ ತಿಳಿಸಿದ್ದಾರೆ. ಇತ್ತ ಉತ್ತರ ಕನ್ನಡ ಜಿಲ್ಲೆಯಲ್ಲೂ ಮಳೆ ಎಡೆಬಿಡದೆ ಸುರಿಯುತ್ತಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಮೃತರ ಕುಟುಂಬಕ್ಕೆ ಭೇಟಿ ನೀಡಿದ್ದ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವ್ರು ತಲಾ 5 ಲಕ್ಷ ರೂಪಾಯಿ ಪರಿಹಾರ ಹಣದ ಚೆಕ್ ನೀಡಿದ್ದಾರೆ. ಈ ವೇಳೆ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಮಳೆ ಸುರಿಯುತ್ತಿರೋದ್ರಿಂದ ಸದ್ಯಕ್ಕೆ ಮೋಡ ಬಿತ್ತನೆ ಮಾಡಲ್ಲ ಅಂತ ಹೇಳಿದ್ದಾರೆ. ಜೊತೆಗೆ ಜುಲೈ 15ರವರೆಗೂ ನೋಡಿ ಬಳಿಕ ಕೇಂದ್ರದ ಮಾರ್ಗ ಸೂಚಿ ಆಧರಿಸಿ ಕ್ರಮ ಕೈಗೊಳ್ಳಲಾಗುತ್ತದೆ ಅಂತ ತಿಳಿಸಿದ್ದಾರೆ.
-masthmagaa.com
Contact Us for Advertisement